ಪುನೀತ್ ರಾಜ್ ಕುಮಾರ್ ಅವರ ಕುಟುಂಬದ ಚಿತ್ರ 
ರಾಜ್ಯ

ದೆಹಲಿಗೆ ಬಂದಿಳಿದ ಪುನೀತ್ ರಾಜ್ ಕುಮಾರ್ ಪುತ್ರಿ ದ್ರಿತಿ, ಸಂಜೆ ಬೆಂಗಳೂರಿಗೆ ಆಗಮನ

 ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ದೃತಿ ಅವರು ಕೆಲವೇ ಕ್ಷಣಗಳ ಹಿಂದೆ ನವದೆಹಲಿಗೆ ಬಂದಿಳಿದರು.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ದೃತಿ ಅವರು ಕೆಲವೇ ಕ್ಷಣಗಳ ಹಿಂದೆ ನವದೆಹಲಿಗೆ ಬಂದಿಳಿದರು.

ಅಮೆರಿಕಾದಿಂದ ಪ್ರಯಾಣಿಸಿದ್ದ ಅವರು ದೆಹಲಿಯ ಇಂದಿರಾಗಾಂಧಿ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ. ಇಂದು ಮಧ್ಯಾಹ್ನ 1-30ಕ್ಕೆ ಹೊರಡಲಿರುವ ಏರ್ ಇಂಡಿಯಾದ ವಿಶೇಷ ವಿಮಾನ 502 ವಿನಲ್ಲಿ ಬೆಂಗಳೂರು ತಲುಪುತ್ತಾರೆ.

ಸಂಜೆ 4-15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿರುವ ದ್ರಿತಿ, ಅಲ್ಲಿಂದ ನೇರವಾಗಿ ಕಂಠೀರವ ಸ್ಟುಡಿಯೋಗೆ ತೆರಳಲಿದ್ದು, ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ. 

ಈ ಮಧ್ಯೆ ಮಧ್ಯಾಹ್ನ ಮೂರು ಗಂಟೆಗೆ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆಗೆ ಸಿದ್ಧತೆ ನಡೆಸಲಾಗಿದೆ. ಕಂಠೀರವ ಕ್ರೀಡಾಂಗಣದಿಂದ ಕಾರ್ಪೋರೇಷನ್ ಸರ್ಕಲ್, ಬಸವೇಶ್ವರ ಸರ್ಕಲ್, ವಿಂಡ್ಸರ್ ಮ್ಯಾನರ್,  ಸ್ಯಾಂಕಿ ಟ್ಯಾಂಕ್, ಸರ್ಕಲ್ ಮಾರಮ್ಮ ದೇವಾಲಯ, ಯಶವಂತಪುರ ಮತ್ತು ಗೊರಗುಂಟೆ ಪಾಳ್ಯ ಮಾರ್ಗವಾಗಿ ಕಂಠೀರವ ಸ್ಟುಡಿಯೋಗೆ ಪಾರ್ಥಿವ ಶರೀರ ತಲುಪಲಿದ್ದು, ಸಂಜೆ ಅಂತ್ಯ ಸಂಸ್ಕಾರ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು

SCROLL FOR NEXT