ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಕಳೆದ ವರ್ಷದ ನಿಯಮದಂತೆ ಈ ಬಾರಿ ಗಣೇಶಾಚರಣೆ: ಸಿಎಂ ಬೊಮ್ಮಾಯಿ

ಕಳೆದ ವರ್ಷ ನೀಡಲಾಗಿದ್ದ ನಿಯಮದಂತೆ ಈ ಬಾರಿಯೂ ಗಣೇಶ ಹಬ್ಬಾಚರಣೆಗೆ ಅನುಮತಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು/ಹುಬ್ಬಳ್ಳಿ: ಕಳೆದ ವರ್ಷ ನೀಡಲಾಗಿದ್ದ ನಿಯಮದಂತೆ ಈ ಬಾರಿಯೂ ಗಣೇಶ ಹಬ್ಬಾಚರಣೆಗೆ ಅನುಮತಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಗಣೇಶೋತ್ಸವ ಆಚರಣೆ ಕುರಿತು ಈಗಾಗಲೇ ಹೇಳಿದಂತೆ ಸೆ. 5 ರಂದು ತಜ್ಞರು ವರದಿ ಸಲ್ಲಿಸುತ್ತಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ವಿಭಿನ್ನವಾಗಿ ಹಬ್ಬ ಆಚರಿಸಲಾಗುತ್ತದೆ. ತಜ್ಞರು ಸಹ ಆಯಾ ಜಿಲ್ಲೆಯಲ್ಲಿ ವರದಿ ಸಲ್ಲಿಸಲು ಕಾಲಾವಕಾಶ ಕೇಳಿದ್ದಾರೆ ಎಂದರು.

ಕಳೆದ ವರ್ಷ ಯಾವ ರೀತಿ ನಿಯಮನುಸಾರ ಗಣೇಶೋತ್ಸವ ಆಚರಿಸಲಾಗಿತ್ತು ಅದೇ ರೀತಿ ಈ ವರ್ಷವು ಕಟ್ಟುನಿಟ್ಟಿನ ಕ್ರಮಗಳ ಮೂಲಕ ಆಚರಿಸಲು ಅನುಮತಿ ನೀಡಲಾಗುತ್ತದೆ. ಈಗಾಗಲೇ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ಆರ್ಥಿಕ ಚಟುವಟಿಕೆಯಷ್ಟೇ ಕೋವಿಡ್ ನಿರ್ವಹಣೆ ಕೂಡ ಮುಖ್ಯವಾಗಿದೆ. ಹೀಗಾಗಿ ಎಲ್ಲಿ ಕೊರೋನಾ ಕಡಿಮೆಯಿರುತ್ತದೊ ಅಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಕೋವಿಡ್ ಪರಿಸ್ಥಿತಿ ಬಗ್ಗೆ ವರದಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ನೀಡುವ ವರದಿಯನ್ನು ತಜ್ಞರ ತಂಡ ಪರಿಶೀಲನೆ ನಡೆಸಿದ ಬಳಿಕ ಗಣೇಶೋತ್ಸವ ಆಚರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT