ಭಾಸ್ಕರ್ ರಾವ್ 
ರಾಜ್ಯ

ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ಬಿ ರಿಪೋರ್ಟ್'ಗೆ ಭಾಸ್ಕರ್ ರಾವ್ ತಕರಾರು ಅರ್ಜಿ

ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದ್ದ ಐಪಿಎಸ್ ಅಧಿಕಾರಿಯ ಫೋನ್ ಕದ್ದಾಲಿಕೆ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಬಿ-ರಿಪೋರ್ಟ್'ಗೆ ಐಪಿಎಸ್ ಅಧಿಕಾರಿ ಎಂ.ಭಾಸ್ಕರ್ ರಾವ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತಕರಾರು ಅರ್ಜಿ ಹಾಕಿದ್ದಾರೆ. 

ಬೆಂಗಳೂರು: ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದ್ದ ಐಪಿಎಸ್ ಅಧಿಕಾರಿಯ ಫೋನ್ ಕದ್ದಾಲಿಕೆ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಬಿ-ರಿಪೋರ್ಟ್'ಗೆ ಐಪಿಎಸ್ ಅಧಿಕಾರಿ ಎಂ.ಭಾಸ್ಕರ್ ರಾವ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತಕರಾರು ಅರ್ಜಿ ಹಾಕಿದ್ದಾರೆ. 

ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಾಕಷ್ಟು ಪುರಾವೆ ಮತ್ತು ಸಾಕ್ಷ್ಯಾಧಾರಗಳು ಲಭ್ಯವಿದೆ. ಆದರೂ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮತ್ತು ಪತ್ರಕರ್ತೆ ಹೆಸರನ್ನು ತನಿಖಾ ವರದಿಯಲ್ಲಿ ಸೇರಿಸಿಲ್ಲ. ಸಾಕ್ಷ್ಯಾಧಾರ ಕೊರತೆಯಿಂದ ನ್ಯಾಯಾಲಯಕ್ಕೆ ಸಿಬಿಐ ಬಿ-ರಿಪೋರ್ಟ್ ಸಲ್ಲಿಕೆ ಸರಿಯಲ್ಲ. ಈ ಬಗ್ಗೆ ಸರಿಯಾದ ತನಿಖೆ ನಡೆಸಬೇಕು ಎಂದು ಭಾಸ್ಕರ್ ರಾವ್ ತಕರಾರು ಅರ್ಜಿಯಲ್ಲಿ ತಿಳಿಸಿದ್ದಾರೆ. 

ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ತನಿಖೆಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಕಂಡು ಬಂದ ಕಾರಣ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮತ್ತು ಪತ್ರಕರ್ತೆಗೆ ಕ್ಲಿನ್ ಚಿಟ್ ನೀಡಲಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿ ಭಾಸ್ಕರ್ ರಾವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT