ಅಧಿಕಾರಿಗಳೊಂದಿಗೆ ಪರಿಶೀಲಿಸುತ್ತಿರುವ ಸಚಿವ ಮುರುಗೇಶ್ ನಿರಾಣಿ 
ರಾಜ್ಯ

ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ: ನಿರಾಣಿ

ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ  ದೊರಕಲಿದೆ ಎಂದು  ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ತುಮಕೂರು: ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ  ದೊರಕಲಿದೆ ಎಂದು  ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್  ನಿರಾಣಿ ಹೇಳಿದ್ದಾರೆ.

ಗುರುವಾರ ತುಮಕೂರಿನ ವಸಂತನರಸಪುರದ ಕೈಗಾರಿಕಾ ಪ್ರದೇಶದಲ್ಲಿರುವ ಪುಡ್ ಪಾಕ್೯ಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಗುವುದು, 15 ದಿನಗದೊಳಗೆ 2022ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿಪಡಿಸಲಾಗುವುದು ಎಂದರು.

ದೇಶ- ವಿದೇಶಗಳಿಂದ ಕೈಗಾರಿಕೆ ಸ್ಥಾಪನೆ ಮಾಡಲು ಉದ್ಯಮಿಗಳಿಗೆ ಆಹ್ವಾನ ನೀಡಲಾಗುವುದು, ಕಳೆದ ಬಾರಿಯಂತೆ ಈ ಬಾರಿಯೂ ಹೂಡಿಕೆದಾರರ ಸಮಾವೇಶವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು, ಈ ಬಾರಿ ಹೊಸದಾಗಿ 5 ಲಕ್ಷ ಉದ್ಯೋಗಗಳನ್ನು ನೀಡುವ ಗುರಿ ಇದೆ ಎಂದರು.

ಸುಮಾರು 105 ಎಕರೆ ಪ್ರದೇಶದ ಪುಡ್ ಪಾರ್ಕ್  ನಲ್ಲಿ 1000 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. ದೇಶ- ವಿದೇಶಗಳಿಂದ ಅನೇಕ ಕಂಪನಿಗಳು ಬರಲಿವೆ. ಮುಂದಿನ ದಿನಗಳಲ್ಲಿ ಇದರಿಂದ ಕೈಗಾರಿಕಾ ಬೆಳವಣಿಗೆಯಾಗಲಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

'ನೀ ನನಗೆ ಇಷ್ಟ ಇಲ್ಲ': ಮದುವೆಯಾದ ಮೊದಲ ದಿನವೇ ಪತ್ನಿಗೆ ಶಾಕ್​​ ಕೊಟ್ಟ ಪತಿ; ಪ್ರಭಾವಿ ಸಚಿವರ PAಯಿಂದಲೇ ದೋಖಾ?

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಜಾರ್ಖಂಡ್‌ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾರ್ ಕ್ಯಾಷಿಯರ್‌ಗೆ ಬೆದರಿಕೆ; ಇಬ್ಬರು ಉದ್ಯಮಿಗಳು, ಪ್ರಭಾವಿ ಮಹಿಳೆ ಮೇಲೆ ಕಣ್ಣಿಟ್ಟ ಪೊಲೀಸರು!