ಅಧಿಕಾರಿಗಳೊಂದಿಗೆ ಪರಿಶೀಲಿಸುತ್ತಿರುವ ಸಚಿವ ಮುರುಗೇಶ್ ನಿರಾಣಿ 
ರಾಜ್ಯ

ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ: ನಿರಾಣಿ

ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ  ದೊರಕಲಿದೆ ಎಂದು  ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ತುಮಕೂರು: ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ  ದೊರಕಲಿದೆ ಎಂದು  ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್  ನಿರಾಣಿ ಹೇಳಿದ್ದಾರೆ.

ಗುರುವಾರ ತುಮಕೂರಿನ ವಸಂತನರಸಪುರದ ಕೈಗಾರಿಕಾ ಪ್ರದೇಶದಲ್ಲಿರುವ ಪುಡ್ ಪಾಕ್೯ಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಗುವುದು, 15 ದಿನಗದೊಳಗೆ 2022ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿಪಡಿಸಲಾಗುವುದು ಎಂದರು.

ದೇಶ- ವಿದೇಶಗಳಿಂದ ಕೈಗಾರಿಕೆ ಸ್ಥಾಪನೆ ಮಾಡಲು ಉದ್ಯಮಿಗಳಿಗೆ ಆಹ್ವಾನ ನೀಡಲಾಗುವುದು, ಕಳೆದ ಬಾರಿಯಂತೆ ಈ ಬಾರಿಯೂ ಹೂಡಿಕೆದಾರರ ಸಮಾವೇಶವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು, ಈ ಬಾರಿ ಹೊಸದಾಗಿ 5 ಲಕ್ಷ ಉದ್ಯೋಗಗಳನ್ನು ನೀಡುವ ಗುರಿ ಇದೆ ಎಂದರು.

ಸುಮಾರು 105 ಎಕರೆ ಪ್ರದೇಶದ ಪುಡ್ ಪಾರ್ಕ್  ನಲ್ಲಿ 1000 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. ದೇಶ- ವಿದೇಶಗಳಿಂದ ಅನೇಕ ಕಂಪನಿಗಳು ಬರಲಿವೆ. ಮುಂದಿನ ದಿನಗಳಲ್ಲಿ ಇದರಿಂದ ಕೈಗಾರಿಕಾ ಬೆಳವಣಿಗೆಯಾಗಲಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ..?

ಕೊಲಂಬಿಯಾ ಸೇನಾ ವಿಮಾನ ಪತನ: ಕನಿಷ್ಠ 66 ಮಂದಿ ಸಾವು, ನೂರಾರು ಮಂದಿಗೆ ಗಾಯ-Video

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಅಮೆರಿಕಾದ ವ್ಯಾಲೆರೋ ರಿಫೈನರಿಯಲ್ಲಿ ಭೀಕರ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಹೆಚ್ಚಿದ ಆತಂಕ

2028ಕ್ಕೆ ರಾಜ್ಯದಲ್ಲಿ ಹಿಂದೂ ಸರ್ಕಾರ: ಪೊಲೀಸರ ಕೈಗೆ AK-47 ಕೊಟ್ಟು, ಪಾಕಿಸ್ತಾನ್ ಜಿಂದಾಬಾದ್ ಅಂದವರ ಬಾಯಿಗೆ ಗುಂಡಿಟ್ಟು ಹೊಡೆಸ್ತೀವಿ; ಯತ್ನಾಳ್

SCROLL FOR NEXT