ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿರುವ ವಿದ್ಯಾರ್ಥಿಗಳು 
ರಾಜ್ಯ

ಕೇರಳದಿಂದ ಬರುವ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಶೈಕ್ಷಣಿಕ ಸಂಸ್ಥೆ ಹಾಗೂ ಅವರ ಕಚೇರಿಯಿಂದಲೇ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆ!

ಗಡಿ ಹಂಚಿಕೊಂಡಿರುವ ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಈ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶಿಸುವ ಮಂದಿಯ ಬಗ್ಗೆ ಕರ್ನಾಟಕ ಹೆಚ್ಚಿನ ಎಚ್ಚರಿಕೆ ವಹಿಸಿದೆ. 

ಬೆಂಗಳೂರು: ಗಡಿ ಹಂಚಿಕೊಂಡಿರುವ ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಈ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶಿಸುವ ಮಂದಿಯ ಬಗ್ಗೆ ಕರ್ನಾಟಕ ಹೆಚ್ಚಿನ ಎಚ್ಚರಿಕೆ ವಹಿಸಿದೆ. 

ಸರ್ಕಾರ ಕೇರಳದಿಂದ ಬರುವವರಿಗೆ ಪ್ರತ್ಯೇಕ ನಿಬಂಧನಗೆಳನ್ನು ಜಾರಿಗೊಳಿಸಿದ್ದು, ಕೇರಳದಿಂದ ಬರುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ತಮ್ಮ ಶೈಕ್ಷಣಿಕ ಸಂಸ್ಥೆಗಳು ಹಾಗೂ ಕಚೇರಿಯಿಂದ ವ್ಯವಸ್ಥೆ ಮಾಡಲಾಗಿರುವ ಸಾಂಸ್ಥಿಕ ಕ್ವಾರಂಟೈನ್ ನಲ್ಲಿಯೇ ಇರಬೇಕಾಗುತ್ತದೆ. ಹೋಮ್ ಐಸೊಲೇಷನ್ ನಲ್ಲಿರುವುದಕ್ಕೆ ಸಾಧ್ಯವಿಲ್ಲ ಎಂದು ಸರ್ಕಾರದ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. 

ವಿದ್ಯಾರ್ಥಿಗಳು, ಉದ್ಯೋಗಿಗಳೊಂದಿಗೆ ಕೇರಳದಿಂದ ಆಗಮಿಸುವವರು ಆರ್ ಟಿ-ಪಿಸಿಆರ್ ನೆಗೆಟೀವ್ ವರದಿಯನ್ನು ರಾಜ್ಯಕ್ಕೆ ಪ್ರವೇಶಿಸುವುದಕ್ಕೂ ಮುನ್ನ ನೀಡಬೇಕಾಗುತ್ತದೆ ಹಾಗೂ 7 ದಿನಗಳ ಕಾಲ ಹೋಮ್ ಐಸೊಲೇಷನ್ ನಲ್ಲಿರಬೇಕಾಗುತ್ತದೆ. 7 ದಿನಗಳ ನಂತರ ಪುನಃ ಪರೀಕ್ಷೆಗೊಳಪಡಿಸಿ ನೆಗೆಟೀವ್ ಬಂದ ನಂತರವಷ್ಟೇ ಐಸೊಲೇಷನ್ ನಿಂದ ಬಿಡುಗಡೆ ಮಾಡಲಾಗುತ್ತದೆ. 

ಒಂದು ವೇಳೆ ಪಾಸಿಟೀವ್ ಬಂದಲ್ಲಿ ಆ ವ್ಯಕ್ತಿಯನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ವಿದ್ಯಾರ್ಥಿಗಳು, ಉದ್ಯೋಗಿಗಳು 72 ಗಂಟೆಗಳನ್ನು ಮೀರದ ಅವಧಿಯ ಆರ್ ಟಿ-ಪಿಸಿಆರ್ ಪ್ರಮಾಣಪತ್ರವನ್ನು ತಮ್ಮೊಂದಿಗೆ ಕೊಂಡೊಯ್ಯಬೇಕಾಗುತ್ತದೆ.

ಸಾಂಸ್ಥಿಕ ಕ್ವಾರಂಟೈನ್ ನಿಂದ ಯಾರಿಗೆ ವಿನಾಯಿತಿ?

  1. ಸಾಂವಿಧಾನಿಕ ಕಾರ್ಯಕರ್ತರು, ಆರೋಗ್ಯ ವೃತ್ತಿಪರರು ಅವರ ಪತಿ-ಪತ್ನಿಯರು 2 ವರ್ಷದೊಳಗಿನ ಮಕ್ಕಳು (ತುರ್ತು ಪರಿಸ್ಥಿತಿ ಎದುರಿಸುತ್ತಿರುವವರು, ಕುಟುಂಬ ಸದಸ್ಯರ ಸಾವು, ವೈದ್ಯಕೀಯ ಚಿಕಿತ್ಸೆಗೆ ತೆರಳುವವರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗಿದೆ)
  2. ಇದಷ್ಟೇ ಅಲ್ಲದೇ ಕಡಿಮೆ ಅವಧಿಗೆ ರಾಜ್ಯಕ್ಕೆ ಭೇಟಿ ನೀಡುವವರು (ಮೂರು ದಿನಗಳ ಅವಧಿ) 
  3. ಓರ್ವ ಪೋಷಕರೊಂದಿಗೆ ಪರೀಕ್ಷೆ ಬರೆಯುವುದಕ್ಕೆ  ಆಗಮಿಸುವ ವಿದ್ಯಾರ್ಥಿಗಳಿಗೆ ವಿನಾಯ್ತಿ ದೊರೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT