ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಕಲಿ ಸಹಿ ಮಾಡಿದ ಖಾಸಗಿ ಆಸ್ಪತ್ರೆಯ ಅಧಿಕಾರಿ ವಿರುದ್ಧ ಕೇಸ್ ದಾಖಲು

ತಮ್ಮ ಸಹಿ ನಕಲಿ ಮಾಡಿದ್ದಾರೆ ಎಂದು ಆರೋಪಿಸಿ ಖಾಸಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ವಿರುದ್ಧ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ.

ಬೆಂಗಳೂರು: ತಮ್ಮ ಸಹಿ ನಕಲಿ ಮಾಡಿದ್ದಾರೆ ಎಂದು ಆರೋಪಿಸಿ ಖಾಸಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ವಿರುದ್ಧ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ.

ಆರ್‌ಟಿಐ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ಅವರು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸರಿಗೆ ಮತ್ತು ಕರ್ನಾಟಕ ವೈದ್ಯಕೀಯ ಮಂಡಳಿಗೆ ದೂರು ನೀಡಿದ್ದು, ಕೋವಿಡ್ -19 ಚಿಕಿತ್ಸೆಗಾಗಿ ಆಸ್ಪತ್ರೆ ಮೋಸ ಮಾಡಿದೆ ಎಂದು ದೂರಿದ್ದಾರೆ.

ಆಗಸ್ಟ್ 14 ರಂದು ವಿಚಾರಣೆಗೆ ಕರೆದಾಗ ನನ್ನ ನಕಲಿ ಸಹಿ ಮಾಡಿದ ಒಂದು ಡಾಕ್ಯುಮೆಂಟ್ ಸಿಕ್ಕಿತು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಉಮೇಶ್ ಎನ್ ಅವರು ನಕಲಿ ದಾಖಲೆ ಸೃಷ್ಟಿಸಿ 10,001 ರೂಪಾಯಿ ಮರುಪಾವತಿ ಪಡೆದಿದ್ದಾರೆ ಎಂದು ಮೂರ್ತಿ ಆರೋಪಿಸಿದ್ದಾರೆ. 

ಡಾಕ್ಯುಮೆಂಟ್ ಅನ್ನು ಖಾಸಗಿ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರು ವಂಚಿಸುವ ಉದ್ದೇಶದಿಂದ ಸಹಿ ನಕಲಿ ಮಾಡಿರುವುದು  ದೃಢಪಟ್ಟಿದೆ. ಹಾಗಾಗಿ ಮೂರ್ತಿ ಅವರು ಡಾ. ಉಮೇಶ್ ವಿರುದ್ಧ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT