ಬಸವರಾಜ ಹೊರಟ್ಟಿ 
ರಾಜ್ಯ

ಮನೆಗಾಗಿ ಪದೇ ಪದೇ ಸರ್ಕಾರದ ಬಳಿ ಅಂಗಲಾಚುವುದಿಲ್ಲ: ಬಸವರಾಜ ಹೊರಟ್ಟಿ ಆಕ್ರೋಶ

ಮನೆ ಕೊಡುವಂತೆ ನಾನು ರಾಜ್ಯ ಸರ್ಕಾರದ ಬಳಿ ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ. ನಾನು ಇನ್ನು ಮುಂದೆ ಮನೆ ಕೇಳುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ: ಮನೆ ಕೊಡುವಂತೆ ನಾನು ರಾಜ್ಯ ಸರ್ಕಾರದ ಬಳಿ ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ. ನಾನು ಇನ್ನು ಮುಂದೆ ಮನೆ ಕೇಳುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, 'ಇಂದು ಮತ್ತೆ ಸರ್ಕಾರಕ್ಕೆ ಪತ್ರ ಬರೆಯುವೆ. ಇದು ನನ್ನ ಕೊನೇಯ ಪತ್ರ. ಮನೆ ನೀಡುವ ವಿಚಾರವಾಗಿ ಸರ್ಕಾರ ವಿಳಂಬ ಮಾಡುತ್ತಿರುವುದರ ವಿರುದ್ಧ ಬೇಸರವಾಗಿದೆ ಎಂದು  ಹೇಳಿದರು.

ಅಂತೆಯೇ ಮೌಲ್ಯಧಾರಿತ ರಾಜಕಾರಣ ಕುಸಿಯುತ್ತಿದೆ. ಗೆದ್ದ ಅಭ್ಯರ್ಥಿಗಳು ಸ್ವಾರ್ಥ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಬೇಕು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲವೋ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತೆ. ಆಯ್ಕೆಯಾದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ನಮ್ಮದು ಪ್ರಜಾಪ್ರಭುತ್ವ ದೇಶ, ಎಲ್ಲರೂ ಜನಪರ ಕೆಲಸ ಮಾಡಬೇಕು ಎಂದು ಹೊರಟ್ಟಿ ಕರೆ ನೀಡಿದರು.

ಇದೇ ವೇಳೆ ಶಾಲೆಗಳ ಆರಂಭದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 1 ರಿಂದ 6 ನೇ ತರಗತಿಯ ಶಾಲೆಗಳನ್ನು ಆರಂಭ ಮಾಡಬೇಕು. ಶಾಲೆ ಆರಂಭ ಮಾಡುವ ಅವಶ್ಯಕತೆ ಇದೆ. ನಾನು ಈ ಹಿಂದೆಯೇ ಶಾಲೆ ಆರಂಭ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT