ಬಂಧಿತ ಆರೋಪಿ ಹಮೀದ್ 
ರಾಜ್ಯ

ಬೆಂಗಳೂರು: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಡ್ರಗ್ ಪೆಡ್ಲರ್ ಬಂಧನ

ಪೊಲೀಸರ ಕೈಗೆ ಸಿಗದೆ ಬರೋಬ್ಬರಿ 8 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ ಕುಖ್ಯಾತ ಗಾಂಜಾ ದಂಧೆಕೋರ ಹಮೀದ್ ಹಾಗೂ ಆತನ ಸಹೋದರನನ್ನು ಕೆಂಗೇರಿ ಉಪವಿಭಾಗದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಪೊಲೀಸರ ಕೈಗೆ ಸಿಗದೆ ಬರೋಬ್ಬರಿ 8 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ ಕುಖ್ಯಾತ ಗಾಂಜಾ ದಂಧೆಕೋರ ಹಮೀದ್ ಹಾಗೂ ಆತನ ಸಹೋದರನನ್ನು ಕೆಂಗೇರಿ ಉಪವಿಭಾಗದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಉಲ್ಲಾಳದ ಹಮೀದ್, ಆತನ ಸಹೋದರ ಸಯೀದ್ ಬಂಧಿತರಾಗಿದ್ದು, ನಗರಕ್ಕೆ ಹೊರ ರಾಜ್ಯದಿಂದ ಟನ್ ಗಟ್ಟಲೆ ಗಾಂಜಾ ತಂದು ಆರೋಪಿಗಳು ಮಾರಾಟ ಮಾಡುತ್ತಿದ್ದರು. 

ಇಬ್ಬರು ಆರೋಪಿಗಳನ್ನು ಎಸಿಪಿ ಕೃಷ್ಣ ಕುಮಾರ್ ನೇತೃತ್ವದ ಪೊಲೀಸರ ತಂಡ ಬಂಧನಕ್ಕೊಳಪಡಿಸಿದ್ದು, ಈ ಇಬ್ಬರು ಆರೋಪಿಗಳ ಬಂಧನದಿಂದ ಇದೀಗ ತಾವರೆಗೆ, ಬ್ಯಾಡರಹಳ್ಳಿ ಹಾಗೂ ವಿಜಯನಗರ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ವರದಿಯಾಗಿದ್ದ 15 ಕೇಸ್'ಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. 

ಹಲವು ವರ್ಷಗಳಿಂದ ನಗರ ಹೊರವಲಯದಲ್ಲಿ ಗಾಂಜಾ ದಂಧೆಯಲ್ಲಿ ಹಮೀದ್ ನಿರತನಾಗಿದ್ದು, ಆತನ ಮೇಲೆ ಜ್ಞಾನಭಾರತಿ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದ ಗಾಂಜಾ ತಂದು ಹಮೀದ್ ನಗರದ ಸಬ್ ಪೆಡ್ಲರ್ ಗಳಿಗೆ ಪೂರೈಸುತ್ತಿದ್ದ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT