ಬಂಧಿತ ಆರೋಪಿ ಹಮೀದ್ 
ರಾಜ್ಯ

ಬೆಂಗಳೂರು: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಡ್ರಗ್ ಪೆಡ್ಲರ್ ಬಂಧನ

ಪೊಲೀಸರ ಕೈಗೆ ಸಿಗದೆ ಬರೋಬ್ಬರಿ 8 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ ಕುಖ್ಯಾತ ಗಾಂಜಾ ದಂಧೆಕೋರ ಹಮೀದ್ ಹಾಗೂ ಆತನ ಸಹೋದರನನ್ನು ಕೆಂಗೇರಿ ಉಪವಿಭಾಗದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಪೊಲೀಸರ ಕೈಗೆ ಸಿಗದೆ ಬರೋಬ್ಬರಿ 8 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ ಕುಖ್ಯಾತ ಗಾಂಜಾ ದಂಧೆಕೋರ ಹಮೀದ್ ಹಾಗೂ ಆತನ ಸಹೋದರನನ್ನು ಕೆಂಗೇರಿ ಉಪವಿಭಾಗದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಉಲ್ಲಾಳದ ಹಮೀದ್, ಆತನ ಸಹೋದರ ಸಯೀದ್ ಬಂಧಿತರಾಗಿದ್ದು, ನಗರಕ್ಕೆ ಹೊರ ರಾಜ್ಯದಿಂದ ಟನ್ ಗಟ್ಟಲೆ ಗಾಂಜಾ ತಂದು ಆರೋಪಿಗಳು ಮಾರಾಟ ಮಾಡುತ್ತಿದ್ದರು. 

ಇಬ್ಬರು ಆರೋಪಿಗಳನ್ನು ಎಸಿಪಿ ಕೃಷ್ಣ ಕುಮಾರ್ ನೇತೃತ್ವದ ಪೊಲೀಸರ ತಂಡ ಬಂಧನಕ್ಕೊಳಪಡಿಸಿದ್ದು, ಈ ಇಬ್ಬರು ಆರೋಪಿಗಳ ಬಂಧನದಿಂದ ಇದೀಗ ತಾವರೆಗೆ, ಬ್ಯಾಡರಹಳ್ಳಿ ಹಾಗೂ ವಿಜಯನಗರ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ವರದಿಯಾಗಿದ್ದ 15 ಕೇಸ್'ಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. 

ಹಲವು ವರ್ಷಗಳಿಂದ ನಗರ ಹೊರವಲಯದಲ್ಲಿ ಗಾಂಜಾ ದಂಧೆಯಲ್ಲಿ ಹಮೀದ್ ನಿರತನಾಗಿದ್ದು, ಆತನ ಮೇಲೆ ಜ್ಞಾನಭಾರತಿ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದ ಗಾಂಜಾ ತಂದು ಹಮೀದ್ ನಗರದ ಸಬ್ ಪೆಡ್ಲರ್ ಗಳಿಗೆ ಪೂರೈಸುತ್ತಿದ್ದ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT