ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾವೇರಿ ಕಾಲಿಂಗ್ ನ 'ಮರ ಮಿತ್ರ' ಆ್ಯಪ್ ಬಿಡುಗಡೆ

ಕಾವೇರಿ ಕೂಗಿನ ಮರ ಮಿತ್ರ ಆಪ್ ಅನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್ ಅವರು ಶುಕ್ರವಾರ ವಿಧಾನ ಸಭೆಯಲ್ಲಿ ಬಿಡುಗಡೆ ಮಾಡಿದರು.

ಬೆಂಗಳೂರು: ಕಾವೇರಿ ಕೂಗಿನ ಮರ ಮಿತ್ರ ಆ್ಯಪ್ ಅನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್ ಅವರು ಶುಕ್ರವಾರ ವಿಧಾನ ಸಭೆಯಲ್ಲಿ ಬಿಡುಗಡೆ ಮಾಡಿದರು.

ಕರ್ನಾಟಕದ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಆರ್ಥಿಕವಾಗಿ ಲಾಭದಾಯಕ ಮತ್ತು ಪರಿಸರಕ್ಕೂ ಲಾಭದಾಯಕವಾದ ಮರ–ಆಧಾರಿತ ಕೃಷಿಯನ್ನು ಉತ್ತೇಜಿಸಲು ನೆಲಮಟ್ಟದಲ್ಲಿ ರೈತರ ಪ್ರಯತ್ನಗಳನ್ನು ತೀವ್ರಗೊಳಿಸುವ ಸಲುವಾಗಿ ಕಾವೇರಿ ಕೂಗು ಈ ಆಪ್ ಬಿಡುಗಡೆ ಮಾಡಿದೆ. 

ಕಾವೇರಿ ಕೂಗಿನ ಸ್ವಯಂಸೇವಕರು, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು 890 ಮರ ಮಿತ್ರರು ಕೆಲಸ ಮಾಡುತ್ತಿರುವ 9 ಜಿಲ್ಲೆಗಳಲ್ಲಿ ಈ ಆಪ್ ಅನ್ನು ಏಕಕಾಲದಲ್ಲಿ ಉದ್ಘಾಟಿಸಲಾಯಿತು. 

ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ರವಿ ಕುಮಾರ್ ಅವರು, ಕೆಎಪಿವೈ ಮತ್ತು ನರೇಗಾ ಕರ್ನಾಟಕ ಸರ್ಕಾರದ ಯೋಜನೆಗಳು. ಈಶಾ ಫೌಂಡೇಷನ್ ಸಸಿ ನೆಡಲು ಸರ್ಕಾರದ ಹಣವನ್ನು ಬಳಸುತ್ತಿದ್ದಾರೆ ಎಂದು ಹೇಳುವುದು ಸರಿಯಲ್ಲ. ಇವು ಸರ್ಕಾರದ ಯೋಜನೆಗಳು. ಈಶಾ ಯೋಜನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ಕಾವೇರಿ ಕೊಳ್ಳ ಪ್ರದೇಶದ 9 ಜಿಲ್ಲೆಗಳಲ್ಲಿ ಮರಗಳ ಕೊರತೆಯಿಂದಾಗಿ ಮಳೆ ನೀರು ನೆಲಕ್ಕೆ ಹಿಂಗದೆ ಹರಿದುಕೊಂಡು ಹೋಗುತ್ತಿದೆ. ಇದು ಹೀಗಾಗಬಾರದು. ನಾವು ಹೆಚ್ಚು ಮರಗಳನ್ನು ಬೆಳೆಸಿದರೆ, ಮಳೆ ನೀರು ಭೂಮಿಯಲ್ಲಿ ಹಿಂಗುತ್ತದೆ. ಇದನ್ನು ಸಾಧ್ಯವಾಗಿಸಲು ಒಟ್ಟಿಗೆ ಶ್ರಮಿಸುತ್ತಿರುವ ಅರಣ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಈಶಾಗೆ ಧನ್ಯವಾದಗಳು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಳವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT