ರೋಹಿಣಿ ಸಿಂಧೂರಿ 
ರಾಜ್ಯ

ಮತ್ತೆ ರೋಹಿಣಿ ಸಿಂಧೂರಿ ಸುದ್ದಿಯಲ್ಲಿ: 6 ಕೋಟಿ ರೂ. ಕಿಕ್ ಬ್ಯಾಕ್ ಆರೋಪ; ವಜಾಗೊಳಿಸುವಂತೆ ಸಾ.ರಾ. ಮಹೇಶ್ ಆಗ್ರಹ

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. 

ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. 

ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ. ಇದಕ್ಕೆ ಅವರು ದಾಖಲೆಗಳನ್ನು ಕೂಡ ಪ್ರದರ್ಶಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಗೆ ಜಿಎಸ್‌ಟಿ ಸೇರಿ 9 ರೂ ಆಗುತ್ತದೆ. ಆದರೆ, ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಕೈಮಗ್ಗ ಇಲಾಖೆಯವರಿಂದ ಖರೀದಿಸದೆ, ಖಾಸಗಿಯವರಿಂದ ಬ್ಯಾಗ್ ಖರೀದಿಸಿದ್ದಾರೆ. ಈ ಒಂದು ಬ್ಯಾಗ್ ಬೆಲೆ 52 ರೂ. ಇದೆ ಎಂದು ಆರೋಪಿಸಿದರು.

ಬ್ಯಾಗ್ ಮೇಲೆ ಕೇವಲ "ನಾನು ಪರಿಸರ ಸ್ನೇಹಿ" ಎಂಬ ಸಾಲು ಹಾಗೂ ಹಾಗೂ ಚಿಹ್ನೆ ಮುದ್ರಣ ಮಾಡಿಸಲು, ಪ್ರತಿ ಚೀಲಕ್ಕೆ 42 ರೂ. ಬಿಲ್ ಮಾಡಿದ್ದಾರೆ. ಒಟ್ಟು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ. ಇದಕ್ಕೆ ವಾಸ್ತವವಾಗಿ ತಗುಲುವುದು 1,47,15,000 ರೂಪಾಯಿ. ಆದರೆ 7 ಕೋಟಿಗೂ ಅಧಿಕ ರೂಪಾಯಿ ನೀಡಿ ಖರೀದಿ ಮಾಡಲಾಗಿದೆ. ಅಂದರೆ 6 ಕೋಟಿ 18 ಲಕ್ಷ ರೂ. ಭ್ರಷ್ಟಾಚಾರ ನಡೆದಿದೆ. ರೋಹಿಣಿ ಸಿಂಧೂರಿ ಆರು ಕೋಟಿ ರೂ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ದೂರಿದರು.

ರೋಹಿಣಿ ಸಿಂಧೂರಿಯನ್ನು ವಜಾಗೊಳಿಸಬೇಕು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುವೆ. ಮುಖ್ಯ ಕಾರ್ಯದರ್ಶಿ ಅವರ ಕಚೇರಿ ಮುಂದೆ ಸದ್ಯದಲ್ಲಿಯೇ ಧರಣಿ ನಡೆಸುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT