ಸಚಿವ ನಾರಾಯಣಗೌಡ 
ರಾಜ್ಯ

ನಿಜವಾದ ಇಂಧನ, ಗ್ಯಾಸ್ ಬಳಕೆದಾರರು ಯಾರೂ ಪ್ರತಿಭಟಿಸಿಲ್ಲ; ಎಲ್ಲಾ ಡ್ರಾಮಾ: ಬೆಲೆ ಏರಿಕೆಗೆ ಸಚಿವ ನಾರಾಯಣ ಗೌಡ ಸಮರ್ಥನೆ

ನಿಜವಾದ ಇಂಧನ, ಗ್ಯಾಸ್ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ, ಬೀದಿಗೆ ಬಂದಿರುವವರು ರಾಜಕಾರಣಿಗಳು ಮಾತ್ರ. ಹೀಗೆ ಕೇಂದ್ರದ ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡು ಕ್ರೀಡಾ ಸಚಿವ ನಾರಾಯಣಗೌಡ ಹೇಳಿಕೆ ನೀಡಿದರು.

ಬೆಂಗಳೂರು: ನಿಜವಾದ ಇಂಧನ, ಗ್ಯಾಸ್ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ, ಬೀದಿಗೆ ಬಂದಿರುವವರು ರಾಜಕಾರಣಿಗಳು ಮಾತ್ರ. ಹೀಗೆ ಕೇಂದ್ರದ ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡು ಕ್ರೀಡಾ ಸಚಿವ ನಾರಾಯಣಗೌಡ ಹೇಳಿಕೆ ನೀಡಿದರು.

ಬೆಲೆ ಏರಿಕೆ ವಿಚಾರವಾಗಿ ಒಂದು ಡ್ರಾಮಾ ನಡೆಯುತ್ತಿದೆ. ಸಮಸ್ಯೆ ಯಾರಿಗೂ ಆಗಿಲ್ಲ, ಇದು ರಾಜಕಾರಣದ ಪಿತೂರಿ. ಕಾಂಗ್ರೆಸ್ ಸರ್ಕಾರ ಇರುವಾಗ ಬೆಲೆ ಏರಿಕೆ ಆಗಿರಲಿಲ್ವಾ? ಬೆಲೆಯಲ್ಲಿ ಏರಿಳಿತ ಸಾಮಾನ್ಯ ಎಂದು ಕೆಸಿ ನಾರಾಯಣಗೌಡ ಹೇಳಿದ್ದಾರೆ. 

ದೇಶದ ಮಹಿಳೆಯರಿಗೆ ತೊಂದರೆ ಆಗಬಾರದೆಂದು ಮನೆ ಮನೆಗೆ ಉಚಿತ ಗ್ಯಾಸ್ ಸೌಲಭ್ಯ ಕೊಟ್ಟವರು ಯಾರು? ಇಂಧನ ಬೆಲೆ ಏರಿಳಿತ ಇರುತ್ತದೆ. ಬೆಲೆ ಏರಿಕೆ ಸಮಸ್ಯೆ ಬಗೆಹರಿಸಲು ಪ್ರಧಾನಿ ಸನ್ನದ್ಧವಾಗುತ್ತಿದ್ದಾರೆ. ಕಾಂಗ್ರೆಸ್‌ನವರಿಂದ ನಾವು ಹೇಳಿಸಿಕೊಳ್ಳಬೇಕಾಗಿಲ್ಲ. ಇಂಧನ ಬೆಲೆ ಹೆಚ್ಚಳ ಅಂತ ಪ್ರತಿಭಟನೆ ಮಾಡಿಸುತ್ತಿರುವುದು ರಾಜಕಾರಣ ಎಂದು ನಾರಾಯಣಗೌಡ ತಿಳಿಸಿದ್ದಾರೆ.

ಬೆಲೆ ಏರಿಕೆ ತಾತ್ಕಾಲಿಕ ಅದು ಕಡಿಮೆ ಆಗುತ್ತದೆ. ಆದರೆ ಶಾಸಕರದ್ದು, ಸಚಿವರದ್ದು ವೇತನ ಹೆಚ್ಚಳ ಆಗಿಲ್ಲ. ನಾವೂ ಕೂಡ ಕೇಳಿಲ್ಲ. ಶಾಸಕರಿಗೂ ಡೀಸೆಲ್, ಪೆಟ್ರೋಲ್ ಖರ್ಚು ಇರುತ್ತದೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT