ಕೆಎಸ್ ಆರ್ ರೈಲ್ವೆ ನಿಲ್ದಾಣ 
ರಾಜ್ಯ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶುರುವಾಗಲಿದೆ ಫುಡ್ ಕೋರ್ಟ್

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.

ಸೌಲಭ್ಯ ಮೇಲ್ದರ್ಜೆಗೇರಿಸಲು ಟೆಂಡರ್ ಕರೆಯಲಾಗಿದೆ. ಆಹಾರ, ಪಾನೀಯ, ಮನರಂಜನೆ, ವಿಶ್ರಾಂತಿ ಸ್ಥಳ ಸೇರಿದಂತೆ ಮಿನಿ ಸಿಟಿ ಸೆಂಟರ್‌ ನಿರ್ಮಿಸಲಾಗುವುದು.

ಭಾರತೀಯ ರೈಲ್ವೇ ನಿಲ್ದಾಣಗಳ ಅಭಿವೃದ್ಧಿ ನಿಗಮ ನಿಯಮಿತ (IRSDC), ದೇಶಾದ್ಯಂತದ ಪ್ರಮುಖ ರೈಲ್ವೇ ನಿಲ್ದಾಣಗಳ ಪುನರಾಭಿವೃದ್ಧಿಗೆ ವಹಿಸಲಾಗಿರುವ ರೈಲ್ವೇ ಅಂಗಸಂಸ್ಥೆ, ಬಿಡ್‌ಗಳನ್ನು ಆಹ್ವಾನಿಸಿದೆ. ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಆರ್ಕೇಡ್ ಸ್ಥಾಪನೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಒಂಬತ್ತು ತಿಂಗಳ ಅವಧಿಗೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

"ಪ್ರಯಾಣಿಕರಿಗೆ ಅತ್ಯುತ್ತಮ ದರ್ಜೆಯ ಸೌಲಭ್ಯಗಳನ್ನು ಒದಗಿಸುವುದು ಮತ್ತು ಅವರ ಪ್ರಯಾಣದ ಅನುಭವವನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶ" ಎಂದು ಅದು ಹೇಳಿದೆ. ಬೇಡಿಕೆ-ಆಧಾರಿತ ವಿನ್ಯಾಸ, ಅತ್ಯುತ್ತಮ ಗುಣಮಟ್ಟ, ಸುರಕ್ಷತೆ ಮತ್ತು ಭದ್ರತೆ, ಆಕರ್ಷಕ ಆದಾಯ ಗಳಿಸುವುದು ಪ್ರಮುಖ ಉದ್ದೇಶವಾಗಿದೆ.

ರೈಲು ಆರ್ಕೇಡ್ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ ಮತ್ತು ರೈಲ್ವೆ ನಿಲ್ದಾಣಗಳನ್ನು ರೈಲೋಪೋಲಿಸ್ ಆಗಿ ಪರಿವರ್ತಿಸಲು ಇದೊಂದದು ಅಸಾಧಾರಣ ಹೆಜ್ಜೆಯಾಗಿದೆ ಎಂದು ಐಆರ್‌ಎಸ್‌ಡಿಸಿ ಸಿಇಒ ಮತ್ತು ಎಂಡಿ ಎಸ್‌ಕೆ ಲೋಹಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಹಾರ ಮತ್ತು ಪಾನೀಯ, ಪುಸ್ತಕಗಳು ಮತ್ತು ನಿಯತಕಾಲಿಕೆಗಳು, ಕೈಮಗ್ಗ ಮತ್ತು ಕಲಾಕೃತಿಗಳು, ಮತ್ತು ಔಷಧಿ ಸೇರಿದಂತೆ ಗ್ರಾಹಕ ಸರಕುಗಳ ಕಿಯೋಸ್ಕ್‌ಗಳು ಮತ್ತು ಪ್ರಯಾಣಿಕರ ಅನುಕೂಲ ಮಳಿಗೆಗಳು ಇದರಲ್ಲಿ ಸೇರಿವೆ,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ವಿರಾಟ್ ಕೊಹ್ಲಿ ಇದ್ದಿದ್ದರೆ ಫಲಿತಾಂಶ ಬೇರೆಯೇ ಆಗಿರುತ್ತಿತ್ತು'; ಗೌತಮ್ ಗಂಭೀರ್ ವಿರುದ್ಧ ಪಾಕ್ ಅನುಭವಿ ಆಟಗಾರ ಅಹ್ಮದ್ ಶೆಹಜಾದ್ ವಾಗ್ದಾಳಿ

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

SCROLL FOR NEXT