ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 
ರಾಜ್ಯ

'ರೈತರೊಂದಿಗೆ ಚರ್ಚೆಗೆ ಕೇಂದ್ರ ಸಿದ್ಧ, ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘ ಸ್ಥಾಪನೆ': ಶೋಭಾ ಕರಂದ್ಲಾಜೆ

ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ‌ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕಲಬುರಗಿ: ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ‌ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪಾದನೆ ಪ್ರಮಾಣ ಹೆಚ್ಚಿಸಲು ಹಾಗೂ ಆರ್ಥಿಕವಾಗಿ ‌ಹಿಂದುಳಿದ ರೈತರಿಗೆ ನೆರವು ನೀಡುವ ಉದ್ದೇಶದಿಂದ 10 ಸಾವಿರ ‌ಕೃಷಿ ಉತ್ಪಾದಕರ ಸಂಘಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ‌ಎಂದರು.

ರೈತರು ಆತ್ಮಹತ್ಯೆ ಆಲೋಚನೆ ಬಿಡಬೇಕು
ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರೈತರು ಯೋಜನೆಯ ಲಾಭ ಪಡೆದು ಆತ್ಮಹತ್ಯೆ ಆಲೋಚನೆ ಬಿಡಬೇಕು. ರೈತರಿಗೆ ಆದಾಯ ಬರಬೇಕೆಂದರೆ ಮಾರ್ಕೆಟ್ ಸಿಗಬೇಕು. ಪ್ರಮುಖ ಬೆಳೆ ಜೊತೆಗೆ ಪರ್ಯಾಯ ಕೃಷಿ ಇರಬೇಕು ಎಂದು ಅವರು ಕಿವಿಮಾತು ಹೇಳಿದರು. 

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ‌ ಮುನ್ನ ಕೃಷಿ ಇಲಾಖೆಗೆ ₹ 23 ಸಾವಿರ ‌ಕೋಟಿ ಹಂಚಿಕೆಯಾಗುತ್ತಿತ್ತು. ಇಡೀ ದೇಶದ ಜನಕ್ಕೆ ಇಷ್ಟು ಹಣ ಬಹಳ ಕಡಿಮೆಯಾಗಿತ್ತು. ಹೀಗಾಗಿ ರೈತರ ನೆರವಿಗೆ ಬರುವ ನಿಟ್ಟಿನಲ್ಲಿ ಮೋದಿ ಅವರು 1.23 ಲಕ್ಷ‌ ಕೋಟಿ ರೂ ಹಣವನ್ನು ಕೃಷಿ ಇಲಾಖೆಗೆ ಹಾಗೂ ಭಾರತೀಯ ‌ಕೃಷಿ ಸಂಶೋಧನಾ ಸಂಸ್ಥೆಗೆ (ಐಸಿಎಆರ್) 8,500 ಕೋಟಿ ರೂ ಹಂಚಿಕೆ ‌ಮಾಡಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಕಾಫಿ, ಮೆಣಸು, ರೋಸ್ ಈರುಳ್ಳಿಗೆ ಸೃಷ್ಟಿಯಾದಂತೆ ರೈತರ ಇತರೆ ಉತ್ಪನ್ನಗಳಿಗೆ ಕ್ಲಸ್ಟರ್ ಆಧಾರಿತ ಮಾರುಕಟ್ಟೆಯನ್ನು ಸೃಷ್ಟಿಸಲು ‌ಕೇಂದ್ರ ಸರ್ಕಾರ ಮುಂದಾಗಿದೆ. ಜಿಡಿಪಿಯಲ್ಲಿ ಒಟ್ಟಾರೆ ಕೃಷಿ ಪಾಲು ಮುಂಚೆ ಶೇ 13ರಷ್ಟಿತ್ತು. ಅದನ್ನು ಶೇ 20ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಶೇ 25ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಈ ಭಾಗದಲ್ಲಿ ಬೆಳೆಯುವ ತೊಗರಿಗೆ ಬೆಂಬಲ ಬೆಲೆ ಹೆಚ್ಚಿಸುವ ಪ್ರಸ್ತಾವ ಬೆಲೆ ಆಯೋಗದ ‌ಮುಂದಿದೆ ಎಂದು ಸ್ಪಷ್ಟಪಡಿಸಿದರು. 

ರೈತರ ಜೊತೆ ಚರ್ಚೆಗೆ ಈಗಲೂ ಸಿದ್ಧ
ದೆಹಲಿಯಲ್ಲಿ ರೈತರ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೋರಾಟ ನಿರತ ರೈತರ ಜೊತೆ 11 ಸುತ್ತು ಮಾತುಕತೆ ಆಗಿದೆ. ರೈತರ ಜೊತೆ ಮಾತನಾಡಲು ನಾವು ಸಿದ್ಧರಿದ್ದೇವೆ. ಆದರೆ ಕೃಷಿ ಕಾಯ್ದೆ ಬಿಲ್ ಯಾಕೆ ಮಾಡಿದ್ದೇವೆ ಎನ್ನುವುದನ್ನು ಹೋರಾಟ ನಿರತ ರೈತರು ಅರ್ಥ ಮಾಡಿಕೊಳ್ಳಬೇಕು ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT