ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಮುಖ್ಯಪೇದೆ ಸರವನ್ನೇ ಕದ್ದ ಖತರ್ನಾಕ್; ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!

ಮುಖ್ಯಪೇದೆಯ ಸರ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದೊಪ್ಪಿಸಿದ  ಘಟನೆ ಸಂತ ಫಿಲೋಮಿನಾ ಚರ್ಚ್ ಬಳಿ ಗುರುವಾರ ರಾತ್ರಿ ನಡೆದಿದೆ.

ಮೈಸೂರು: ಮುಖ್ಯಪೇದೆಯ ಸರ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದೊಪ್ಪಿಸಿದ  ಘಟನೆ ಸಂತ ಫಿಲೋಮಿನಾ ಚರ್ಚ್ ಬಳಿ ಗುರುವಾರ ರಾತ್ರಿ ನಡೆದಿದೆ.

ರಾತ್ರಿ 9,30ರ ಸುಮಾರಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಮುಖ್ಯ ಪೇದೆ ಇಲಿಯಾಸ್ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಪೇದೆಯ ಕತ್ತಿನಲ್ಲಿದ್ದ ಸರವನ್ನು ಕಸಿದು ಓಡುತ್ತಿದ್ದ, ಇದನ್ನು ಗಮನಿಸಿದ ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿ ಆತನನ್ನು ಹಿಂಬಾಲಿಸಿದ್ದಾರೆ, ಕೂಡಲೇ ಕಳ್ಳ ಪಾರ್ಕ್ ಗೆ ಓಡಿ ಹೋಗಿ ಅಲ್ಲಿ ಅವಿತು ಕುಳಿತಿದ್ದ, ಅಲ್ಲಿಯೇ ಇದ್ದ ಕೆಲವು ಯುವಕರು ಕಳ್ಳನನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ.

ಆತನೊಬ್ಬ ಸರಣಿ ಸರ ಕಳ್ಳನಾಗಿದ್ದು, ಲಷ್ಕರ್ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದ್ದಾರೆ. ಆದರೆ ಮುಖ್ಯಪೇದೆ ಆರೋಪಿ ವಿರುದ್ಧ ದೂರು ದಾಖಲಿಸಲಿಲ್ಲ, ಇದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT