ಸಂಗ್ರಹ ಚಿತ್ರ 
ರಾಜ್ಯ

ಇಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು: ಬೆಂಗಳೂರು ಮೂಲದ ಶಂಕಿತನ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ

ಇಸಿಸ್ ಸೇರಿದಂತೆ ಇನ್ನಿತರ ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಆರೋಪದಡಿ ಬಂಧಿತನಾಗಿದ್ದ ಶಂಕಿತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಇಸಿಸ್ ಸೇರಿದಂತೆ ಇನ್ನಿತರ ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಆರೋಪದಡಿ ಬಂಧಿತನಾಗಿದ್ದ ಶಂಕಿತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. 

ಆರೋಪಿ ಉಗ್ರಗಾಮಿ ಶಿಹಾಬುದ್ದೀನ್ ವಿರುದ್ಧ ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ, ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಶಿಹಾಬುದ್ದೀನ್ ಭಯೋತ್ಪಾದನಾ ಚಟುವಟಿಕೆಯ ಪಿತೂರಿಯ ದೊಡ್ಡ ಭಾಗವಾಗಿದ್ದು, ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ದೋಷಾರೋಪ‌ಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ಉಗ್ರಗಾಮಿ ಸಂಘಟನೆಯ ನಂಟಿದ್ದ ಬೆಂಗಳೂರು ಮೂಲದ ಮೆಹಬೂಬ್ ಪಾಷಾ ಮತ್ತು 16 ಜನರನ್ನು ದಕ್ಷಿಣ ಭಾರತದಲ್ಲಿ ಯುವ ಮುಸ್ಲಿಮರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ತಂಡ ರಚನೆಯ ಆರೋಪದಲ್ಲಿ ಎನ್‌ಐಎ ಬಂಧಿಸಿತ್ತು‌. 

ಈ ಪ್ರಕರಣದ ಭಾಗವಾಗಿ ಉಗ್ರಗಾಮಿ ಶಿಹಾಬುದ್ದೀನ್‌ನ ವಿರುದ್ಧ ಇದೀಗ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಈ ತಂಡ ಬೆಂಗಳೂರನ್ನು ಕೇಂದ್ರ‌ವಾಗಿರಿಸಿಕೊಂಡು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವಾರು ಕ್ರಿಮಿನಲ್ ಪಿತೂರಿ ಸಭೆಗಳನ್ನು ನಡೆಸಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಭಯೋತ್ಪಾದಕ ಕೃತ್ಯಗಳು, ಹಿಂದೂ ನಾಯಕರ ಹತ್ಯೆಗೆ ಸಂಬಂಧಿಸಿದಂತೆ ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಉಗ್ರ ಮೊಯ್ದೀನ್ ಎಂಬಾತನೊಂದಿಗೆ ಸೇರಿ ಈ ಎಲ್ಲಾ ಕೃತ್ಯಗಳ ಭಾಗವಾಗಿದ್ದು, ಈ ಹಿನ್ನೆಲೆಯಲ್ಲಿ ಶಿಹಾಬುದ್ದೀನ್ ವಿರುದ್ಧ ದೋಷಾರೋಪ‌ಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT