ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ 
ರಾಜ್ಯ

ಕೊರೋನಾ 2ನೇ ಅಲೆಯಲ್ಲಿ ರಾಜ್ಯದಲ್ಲಿ 2ನೇ ಬಾರಿಗೆ ಸಾವಿರಕ್ಕಿಂತ ಕಡಿಮೆ ಸೋಂಕು; ಇಂದು 983; 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ!

ಕೊರೋನಾ ಎರಡನೇ ಅಲೆ ಪ್ರಾರಂಭವಾದ ಬಳಿಕ ಇದು 2 ನೇ ಬಾರಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ. 

ಬೆಂಗಳೂರು: ಕೊರೋನಾ ಎರಡನೇ ಅಲೆ ಪ್ರಾರಂಭವಾದ ಬಳಿಕ ಇದು 2 ನೇ ಬಾರಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ. 

ಸೆ.04 ರಂದು 983 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 2954047 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 21 ಮಂದಿ ಬಲಿಯಾಗಿದ್ದರೆ,  ಇದರೊಂದಿಗೆ ಸಾವಿನ ಸಂಖ್ಯೆ 37401ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 289 ಮಂದಿಗೆ ಸೋಂಕು ದೃಢಪಟ್ಟಿದ್ದು ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1239123 ಕ್ಕೆ ಏರಿಕೆಯಾಗಿದ್ದರೆ 7 ಮಂದಿ ನಗರದಲ್ಲಿ ಕೋವಿಡ್-19 ನಿಂದ ಮೃತಪಟ್ಟಿದ್ದಾರೆ. 

ರಾಜ್ಯದಲ್ಲಿ ಇಂದು 1,620 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2898874ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರೀಯ ಪ್ರಕರಣಗಳು 17746ಕ್ಕೆ ಇಳಿಕೆಯಾಗಿದೆ. 

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.61ಕ್ಕೆ ಇಳಿದಿದೆ.ಗದಗ, ಯಾದಗಿರಿ, ರಾಮನಗರ, ರಾಯಚೂರು, ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್-19 ಸೋಂಕು ವರದಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT