ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಬೊಮ್ಮಾಯಿ 
ರಾಜ್ಯ

5 ದಿನಗಳ ಕಾಲ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರದಿಂದ ಷರತ್ತುಬದ್ದ ಅನುಮತಿ..!: ಇಷ್ಟಕ್ಕೂ ಷರತ್ತುಗಳೇನು..? ಇಲ್ಲಿದೆ ಮಾಹಿತಿ

ಹಲವು ಒತ್ತಡಗಳ ನಡುವೆಯೇ ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

ಬೆಂಗಳೂರು: ಹಲವು ಒತ್ತಡಗಳ ನಡುವೆಯೇ ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ತಾವೇ ಮಾಡಿದ್ದ ಹಾರ-ತುರಾಯಿ ನಿಷೇಧ ನಿಯಮ ಉಲ್ಲಂಘಿಸಿದ ಸಿಎಂ ಬೊಮ್ಮಾಯಿ..?
 
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌. ಅಶೋಕ್ ಅವರು, ʼಗರಿಷ್ಠ ಐದು ದಿನಗಳವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT