ವಿಜಯಪುರ, ಬಾಗಲಕೋಟೆಗಳಲ್ಲಿ ಕಡಿಮೆ ತೀವ್ರತೆಯ ಭೂಕಂಪನ 
ರಾಜ್ಯ

ವಿಜಯಪುರ, ಬಾಗಲಕೋಟೆಗಳಲ್ಲಿ ಕಡಿಮೆ ತೀವ್ರತೆಯ ಭೂಕಂಪನ

ವಿಜಯಪುರ, ಬಾಗಲಕೋಟೆಗಳಲ್ಲಿ ಸೆ.04 ರಂದು ಮಧ್ಯರಾತ್ರಿ ಕಡಿಮೆ ತೀವ್ರತೆಯ ಭೂಕಂಪನ ವರದಿಯಾಗಿದೆ. 

ಬೆಂಗಳೂರು: ವಿಜಯಪುರ, ಬಾಗಲಕೋಟೆಗಳಲ್ಲಿ ಸೆ.04 ರಂದು ಮಧ್ಯರಾತ್ರಿ ಕಡಿಮೆ ತೀವ್ರತೆಯ ಭೂಕಂಪನ ವರದಿಯಾಗಿದೆ. ಕರ್ನಾಟಕ ರಾಜ್ಯ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು ಕೊಲ್ಹಾಪುರ ಜಿಲ್ಲೆಯಲ್ಲಿ 3.9 ತೀವ್ರತೆ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕಡಿಮೆ ತೀವ್ರತೆಯ ಕಂಪನ ಅನುಭವಕ್ಕೆ ಬಂದಿದೆ. 

ವಿಜಯಪುರ ನಗರ, ಬಸವನ ಬಾಗೇವಾಡಿ, ಟಿಕೊಟಾ, ಇಂಡಿ, ಸಿಂಧಗಿಯಲ್ಲಿನ ಜನರು ರಾತ್ರಿ 11:30 ಕ್ಕೆ ಕಂಪನವಾಗುತ್ತಿದ್ದಂತೆಯೇ ಮನೆಯಿಂದ ಹೊರಬರಲಾರಂಭಿಸಿದರು. ಆದರೆ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ಮಾಹಿತಿ ಬಂದಿಲ್ಲ.

ಕೀರ್ತಿ ನಗರದ ನಿವಾಸಿ ಶೇಖರಾಜ್ ಪಾಟೀಲ್ ಈ ಬಗ್ಗೆ ಮಾತನಾಡಿದ್ದು, "ಆಗ ನಿದ್ದೆ ಮಾಡುವ ಸಮಯವಾಗಿತ್ತು, ಕಂಪನದ ಅನುಭವವಾಗುತ್ತಿದ್ದಂತೆಯೇ ಕುಟುಂಬ ಸದಸ್ಯರು ಮನೆಯಿಂದ ಹೊರಬರಲಾರಂಭಿಸಿದೆವು. ಅರ್ಧಗಂಟೆಯ ಅವಧಿಯಲ್ಲಿ 2 ಕಂಪನಗಳ ಅನುಭವವಾಗಿತ್ತು ಎಂದು ಹೇಳಿದ್ದಾರೆ. 

ಡಿ.ಸಿ ಸುನಿಲ್ ಕುಮಾರ್ ಮಾತನಾಡಿದ್ದು, "ವಿಪತ್ತು ನಿಗಾ ಕೇಂದ್ರ ಕಡಿಮೆ ತೀವ್ರತೆಯ ಕಂಪನ ವರದಿಯಾಗಿದೆ. ಜನತೆ ಆತಂಕ ಪಡುವ ಅಗತ್ಯವಿಲ್ಲ ಕೆಎಸ್ ಎನ್ ಡಿಎಂಸಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ" ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT