ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದರು. 
ರಾಜ್ಯ

ಪ್ರಸಕ್ತ ಶೈಕ್ಷಣಿಕ ವರ್ಷ 5 ಸಾವಿರ ಶಿಕ್ಷಕರ ನೇಮಕ: ಸಿಎಂ ಬಸವರಾಜ ಬೊಮ್ಮಾಯಿ 

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿನ್ನೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ನಮ್ಮ ಶಾಲೆ, ನನ್ನ ಕೊಡುಗೆ' ಆಪ್ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳಿಗೆ ಕೊಡುಗೆ ನೀಡಲು ಸಹಾಯಕವಾಗುತ್ತಿದೆ ಎಂದರು. ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಅವರು, ಎನ್ ಇಪಿ ವಿದ್ಯಾರ್ಥಿ ಸ್ನೇಹಿ ಯೋಜನೆ. ಈ ಕ್ರಾಂತಿಕಾರಿ ನೀತಿಯನ್ನು ಸದ್ಭಳಕೆ ಮಾಡಿಕೊಂಡು ಶಾಲೆಗಳು, ಶಿಕ್ಷಕರು ಮತ್ತು ಸರ್ಕಾರವನ್ನು ಒಗ್ಗೂಡಿಸಿಕೊಂಡು ಶಿಕ್ಷಣ ಮತ್ತು ವಿದ್ಯಾರ್ಥಿಗಳ ಬೆಳವಣಿಗೆಗೆ ಸಿದ್ಧತೆ ನಡೆಸಿಕೊಳ್ಳಬೇಕು ಎಂದರು.

ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಶಿಕ್ಷಕರು ಮಾಡಿರುವ ಕೆಲಸಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಶ್ಲಾಘಿಸಿದರು. ರಾಜ್ಯದಲ್ಲಿ ಕಳೆದ ವರ್ಷ ಸಾಂಕ್ರಾಮಿಕ ಕಂಡುಬಂದ ನಂತರ 31 ಶಿಕ್ಷಕರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್