ಸಚಿವ ಆರ್. ಅಶೋಕ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ 
ರಾಜ್ಯ

ಮನೆ-ಮನೆಗೆ ಸಮೀಕ್ಷೆಯಿಂದಾಗಿ ನಗರದ ಆರೋಗ್ಯ ಸ್ಥಿತಿ ಕುರಿತು ಸ್ಪಷ್ಟ ಚಿತ್ರಣ ದೊರೆಯುತ್ತಿದೆ: ಸಚಿವ ಆರ್ ಅಶೋಕ

ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ' ಎಂಬ ಯೋಜನೆಯಡಿ ನಗರದಲ್ಲಿನ ಮನೆ ಮನೆಗೆ ತೆರಳಿ ನಡೆಸಲಾಗುತ್ತಿರುವ ಸಮೀಕ್ಷೆಯು ಆರೋಗ್ಯ ಸ್ಥಿತಿ ಕುರಿತು ಸ್ಪಷ್ಟ ಚಿತ್ರಣಗಳು ಸರ್ಕಾರಕ್ಕೆ ದೊರೆಯುತ್ತಿದೆ ಎಂದು ಸಚಿವ ಆರ್. ಅಶೋಕ್ ಅವರು ಸೋಮವಾರ ಹೇಳಿದ್ದಾರೆ. 

ಬೆಂಗಳೂರು: 'ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ' ಎಂಬ ಯೋಜನೆಯಡಿ ನಗರದಲ್ಲಿನ ಮನೆ ಮನೆಗೆ ತೆರಳಿ ನಡೆಸಲಾಗುತ್ತಿರುವ ಸಮೀಕ್ಷೆಯು ಆರೋಗ್ಯ ಸ್ಥಿತಿ ಕುರಿತು ಸ್ಪಷ್ಟ ಚಿತ್ರಣಗಳು ಸರ್ಕಾರಕ್ಕೆ ದೊರೆಯುತ್ತಿದೆ ಎಂದು ಸಚಿವ ಆರ್. ಅಶೋಕ್ ಅವರು ಸೋಮವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ ಯೋಜನೆಯಡಿ ನಗರದಲ್ಲಿ ಮನೆ-ಮನೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತಿದ್ದು, ಯೋಜನೆ ಅಡಿ 60 ದಿನಗಳ ಸಮೀಕ್ಷೆ ಕೈಗೊಳ್ಳಲಾಗಿದೆ. ಕಳೆದ 21 ದಿನಗಳಲ್ಲಿ 2,48,280 ಮನೆಗೆ ಭೇಟಿ ನಿಡಿ 7,11,648 ಮಂದಿಗೆ ಆರೋಗ್ಯ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 22,362 ಮಂದಿಗೆ ಕೋವಿಡ್ ದೃಢಪಟ್ಟವರಾಗಿದ್ದಾರೆಂದು ತಿಳಿದುಬಂದಿದೆ. 

4,39,777 ಮಂದಿ ಮೊದಲನೇ ಡೋಸ್ ಪಡೆದವರು, 1,67,081 ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಸಮೀಕ್ಷೆ ಮಾಡಿದವರಲ್ಲಿ 57,528 ಮಂದಿ ದೀರ್ಘಕಾಲಿಕ ರೋಗಗಳಿರುವವರಿದ್ದು, ಶೇ. 50.8 ರಷ್ಟು ಮಂದಿಗೆ ಡಯಾಬಿಟಿಸ್, ಶೇ. 35.82 ರಷ್ಟು ಮಂದಿಗೆ ರಕ್ತದೊತ್ತಡ, 2.48 ರಷ್ಟು ಮಂದಿಗೆ ಹೃದಯ ಸಂಬಂಧಿ ಖಾಯಿಲೆ, 2.99 ರಷ್ಟು ಮಂದಿಗೆ ಥೈರಾಯ್ಡ್ ಖಾಯಿಲೆಯಿರುವುದು ತಿಳಿದುಬಂದಿದೆ.

ಮನೆ-ಮನೆ ಆರೋಗ್ಯ ಸಮೀಕ್ಷೆಯನ್ನು ಶೇ.90 ರಷ್ಟು ಗುರಿ ಸಾಧಿಸಿದ್ದು, ನಿಗದಿತ ಸಮಯದಲ್ಲಿ ಮನೆ-ಮನೆ ಆರೋಗ್ಯ ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. 

ಈ ಸಮೀಕ್ಷೆಯು ಕೇವಲ ಲಸಿಕೆಯ ಸ್ಥಿತಿಗತಿಯನ್ನಷ್ಟೇ ತಿಳಿದುಕೊಳ್ಳಲ್ಲದೆ, ಜನರ ಆರೋಗ್ಯ ಸ್ಥಿತಿಗತಿ ತಿಳಿದುಕೊಳ್ಳಲು ಸಹಾಯಕವಾಗಿದೆ. ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ ಈ ಸಮೀಕ್ಷಾ ವರದಿ ಸಹಾಯ ಮಾಡಲಿದೆ ಎಂದಿದ್ದಾರೆ. 

ಸಮೀಕ್ಷಾ ವರದಿಯು ಕೊರೋನಾ 3ನೇ ಅಲೆ ಎದುರಿಸಲು ಸಹಾಯ ಮಾಡಲಿದೆ. ಮೂರನೇ ಅಲೆ ಎದುರಿಸಲು ಮುಖ್ಯಮಂತ್ರಿಗಳು ಸಮಿತಿಯನ್ನು ರಚನೆ ಮಾಡಿದ್ದಾರೆ. ಈಗಗಾಲೇ ರೂ.120 ಕೋಟಿ ಬಿಡುಗಡೆಗೂ ಒಪ್ಪಿಗೆ ನೀಡಿದ್ದು, ವೈದ್ಯಕೀಯ ನೆರವಿಗೆ ಈ ಹಣವನ್ನು ಮೀಸಲಿಡಲಾಗಿದೆ. ಜನರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದ್ದು, ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಿಗೆ ಭೇಟಿ ನೀಡುವುದನ್ನು ನಿಯಂತ್ರಿಸಬೇಕು ಎಂದು ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT