ಸಂಗ್ರಹ ಚಿತ್ರ 
ರಾಜ್ಯ

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕಕ್ಕೆ ಹೈಕೋರ್ಟ್ ಅನುಮತಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕ ಮಾಡಲು  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕ ಮಾಡಲು  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದೆ. 

ಅಧ್ಯಕ್ಷರ ನೇಮಕ ಪ್ರಕ್ರಿಯೆಯಲ್ಲಿ ಅವರ ವಿದ್ಯಾರ್ಹತೆ ಮತ್ತು ಅನುಭವದ ಅರ್ಹತೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪರಿಗಣಿಸದೆ ನೇಮಕ ಪ್ರಕ್ರಿಯೆ ನಡೆಸಲಾಗಿದೆ ಎಂದು ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪೀಠ ವಿಚಾರಣೆ ನಡೆಸುತ್ತಿದೆ.

ವಿಚಾರಣೆ ವೇಳೆ ಅಧ್ಯಕ್ಷರ ಸ್ಥಾನಕ್ಕೆ ನೇಮಕ ಆಗಿರುವ ವ್ಯಕ್ತಿಯ ಹೆಸರನ್ನು ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿತು. 2020ರ ಜುಲೈನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಡಿಸುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ ಎಂದು ವಿವರಿಸಿತು. 

ಈ ವೇಳೆ ಸರ್ಕಾರದ ಆಯ್ಕೆ ಪರಿಶೀಲಿಸಿದ ಪೀಠ, ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು ಎಂದು ತಿಳಿಸಿತು.

ಅಧ್ಯಕ್ಷರಾಗುವವರಿಗೆ ಪರಿಸರಕ್ಕೆ ಸಂಬಂಧಿಸಿದ ಯಾವುದಾದರೂ ಸಂಸ್ಥೆಯನ್ನು ನಿರ್ವಹಿಸಿದ ಅನುಭವ ಇರಬೇಕಾಗುತ್ತದೆ. ಎಲ್ಲಾ ಅರ್ಹತೆ ಇರುವಂತೆ ನೋಡಿಕೊಂಡು ನೇಮಕ ಪ್ರಕ್ರಿಯೆ ಹೊಸದಾಗಿ ಆರಂಭಿಸುವಂತೆ 2021ರ ಫೆಬ್ರುವರಿಯಲ್ಲಿ ಪೀಠ ತಿಳಿಸಿತ್ತು. ಆದರೂ, 2020ರ ಜುಲೈನ್‌ನಲ್ಲಿ ಹೊರಡಿಸಿರುವ ಪ್ರಕಟಣೆಯಂತೆ ಈಗಾಗಲೇ ಹುದ್ದೆಗೆ ಆಯ್ಕೆ ಮಾಡಿರುವ ವ್ಯಕ್ತಿ ಈ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT