ಸಂಗ್ರಹ ಚಿತ್ರ 
ರಾಜ್ಯ

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕಕ್ಕೆ ಹೈಕೋರ್ಟ್ ಅನುಮತಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕ ಮಾಡಲು  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕ ಮಾಡಲು  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದೆ. 

ಅಧ್ಯಕ್ಷರ ನೇಮಕ ಪ್ರಕ್ರಿಯೆಯಲ್ಲಿ ಅವರ ವಿದ್ಯಾರ್ಹತೆ ಮತ್ತು ಅನುಭವದ ಅರ್ಹತೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪರಿಗಣಿಸದೆ ನೇಮಕ ಪ್ರಕ್ರಿಯೆ ನಡೆಸಲಾಗಿದೆ ಎಂದು ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪೀಠ ವಿಚಾರಣೆ ನಡೆಸುತ್ತಿದೆ.

ವಿಚಾರಣೆ ವೇಳೆ ಅಧ್ಯಕ್ಷರ ಸ್ಥಾನಕ್ಕೆ ನೇಮಕ ಆಗಿರುವ ವ್ಯಕ್ತಿಯ ಹೆಸರನ್ನು ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿತು. 2020ರ ಜುಲೈನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಡಿಸುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ ಎಂದು ವಿವರಿಸಿತು. 

ಈ ವೇಳೆ ಸರ್ಕಾರದ ಆಯ್ಕೆ ಪರಿಶೀಲಿಸಿದ ಪೀಠ, ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು ಎಂದು ತಿಳಿಸಿತು.

ಅಧ್ಯಕ್ಷರಾಗುವವರಿಗೆ ಪರಿಸರಕ್ಕೆ ಸಂಬಂಧಿಸಿದ ಯಾವುದಾದರೂ ಸಂಸ್ಥೆಯನ್ನು ನಿರ್ವಹಿಸಿದ ಅನುಭವ ಇರಬೇಕಾಗುತ್ತದೆ. ಎಲ್ಲಾ ಅರ್ಹತೆ ಇರುವಂತೆ ನೋಡಿಕೊಂಡು ನೇಮಕ ಪ್ರಕ್ರಿಯೆ ಹೊಸದಾಗಿ ಆರಂಭಿಸುವಂತೆ 2021ರ ಫೆಬ್ರುವರಿಯಲ್ಲಿ ಪೀಠ ತಿಳಿಸಿತ್ತು. ಆದರೂ, 2020ರ ಜುಲೈನ್‌ನಲ್ಲಿ ಹೊರಡಿಸಿರುವ ಪ್ರಕಟಣೆಯಂತೆ ಈಗಾಗಲೇ ಹುದ್ದೆಗೆ ಆಯ್ಕೆ ಮಾಡಿರುವ ವ್ಯಕ್ತಿ ಈ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT