ವಿಕೆ ಶಶಿಕಲಾ 
ರಾಜ್ಯ

ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಕರ್ಯ: ವರದಿ ಸಲ್ಲಿಸಲು ಅ.8ರ ಗಡುವು ನಿಗದಿಪಡಿಸಿದ ಹೈಕೋರ್ಟ್

ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್‌ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.

ಬೆಂಗಳೂರು: ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್‌ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. 

ಎಸಿಬಿ ನಿಗದಿತ ಗಡುವಿನಲ್ಲಿ ತನಿಖೆಯ ವರದಿ ಸಲ್ಲಿಸುವಲ್ಲಿ ವಿಫಲವಾದರೆ. ಮುಂದಿನ ವಿಚಾರಣೆಯ ನಡೆಯುವ ಅಕ್ಟೋಬರ್ 8ರಂದು ಗೃಹ ಇಲಾಖೆಯ ಕಾರ್ಯದರ್ಶಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಹೈಕೋರ್ಟ್ ಹೇಳಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು ಚೆನ್ನೈನ ಅಲ್ವಾರ್‌ಪೇಟೆಯ ಸಾಮಾಜಿಕ ಕಾರ್ಯಕರ್ತೆ ಮತ್ತು ಶಿಕ್ಷಣ ತಜ್ಞೆ ಕೆಎಸ್ ಗೀತಾ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ನೀಡಿದೆ.

2014ರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಿವಗಂತ ಜೆ ಜಯಲಲಿತಾ ಜೊತೆಗೆ ಸಹ ಆರೋಪಿ ಎನಿಸಿ, ನಂತರ ಆರೋಪ ಸಾಬೀತಾಗಿದ್ದರಿಂದ ಅಪರಾಧಿಯಾಗಿ ಶಶಿಕಲಾ ಅವರು ಶಶಿಕಲಾ ಅವರು 2017ರ ಫೆಬ್ರುವರಿ 15ರಂದು ಪೊಲೀಸರಿಗೆ ಶರಣಾಗಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆ ಅನುಭವಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT