ರಾಜ್ಯ

ರಾಜಕಾರಣಿಗಳು ಕನಕದಾಸರನ್ನು ಹೈಜಾಕ್ ಮಾಡಲು ಬಿಡಬಾರದು: ಚೇತನ್ ಟ್ವಿಟ್ ನ ಮರ್ಮವೇನು?

Nagaraja AB

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ  ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 'ಜಾತಿ ನಾಯಕ' ಎಂದು ಟ್ವೀಟ್ ಮಾಡಿದ್ದ ನಟ ಚೇತನ್ ಇಂದು, ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸಿಕೊಳ್ಳುವ ಸ್ವ- ಸೇವಕ ರಾಜಕಾರಣಿಗಳು ಕನಕದಾಸರನ್ನು ಹೈ ಜಾಕ್ ಮಾಡಲು ಬಿಡಬಾರದು ಎಂದು ಟ್ವೀಟ್ ಮಾಡಿದ್ದಾರೆ.

ಕನದಾಸರು 16 ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜದ ಕನಸನ್ನು ಕಂಡಿದ್ದರು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ್ದ ಕನಕದಾಸರು, ಜಾತಿ, ಧರ್ಮ, ಲಿಂಗವನ್ನು ಮೀರಿದ್ದ ನಮೆಲ್ಲರಿಗೂ ಸೇರಿದವರಾಗಿದ್ದಾರೆ ಎಂದು ಚೇತನ್ ಹೇಳಿದ್ದಾರೆ. ಚೇತನ್ ಮಾಡಿರುವ ಈ ಟ್ವಿಟ್ ಮರ್ಮವೇನು ಎಂಬುದು ಗೊತ್ತಾಗಿಲ್ಲ.

ಕಳೆದ ಶನಿವಾರ ಟ್ವೀಟ್ ಮಾಡಿದ್ದ ಚೇತನ್, ಸಿದ್ದರಾಮಯ್ಯ ಕರ್ನಾಟಕ ಮತ್ತು ಕಾಂಗ್ರೆಸ್ ನ ಪ್ರಬಲ ನಾಯಕ. ಆದರೆ. ಬ್ರಾಹ್ಮಣ್ಯವನ್ನು ಆಳವಾಗಿ ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ ಎಂದಿದ್ದರು.

ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ಜಾತಿ ವಿರೋಧಿ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯ ಅವರ ಸೇವೆ ಹುಟ್ಟಿದ ಜಾತಿಗೆ ಮಾತ್ರ ಸೀಮಿತವಾಗಿದ್ದು, ಇತರೆ ಬಹುಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ ಎಂದು ಟ್ವೀಟ್ ಮಾಡಿದ್ದರು.

SCROLL FOR NEXT