ನಟ ಚೇತನ್ ಕುಮಾರ್ 
ರಾಜ್ಯ

ರಾಜಕಾರಣಿಗಳು ಕನಕದಾಸರನ್ನು ಹೈಜಾಕ್ ಮಾಡಲು ಬಿಡಬಾರದು: ಚೇತನ್ ಟ್ವಿಟ್ ನ ಮರ್ಮವೇನು?

ಕೆಲ ದಿನಗಳ ಹಿಂದಷ್ಟೇ  ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 'ಜಾತಿ ನಾಯಕ' ಎಂದು ಟ್ವೀಟ್ ಮಾಡಿದ್ದ ನಟ ಚೇತನ್ ಇಂದು, ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸಿಕೊಳ್ಳುವ ಸ್ವ- ಸೇವಕ ರಾಜಕಾರಣಿಗಳು ಕನಕದಾಸರನ್ನು ಹೈ ಜಾಕ್ ಮಾಡಲು ಬಿಡಬಾರದು ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ  ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 'ಜಾತಿ ನಾಯಕ' ಎಂದು ಟ್ವೀಟ್ ಮಾಡಿದ್ದ ನಟ ಚೇತನ್ ಇಂದು, ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸಿಕೊಳ್ಳುವ ಸ್ವ- ಸೇವಕ ರಾಜಕಾರಣಿಗಳು ಕನಕದಾಸರನ್ನು ಹೈ ಜಾಕ್ ಮಾಡಲು ಬಿಡಬಾರದು ಎಂದು ಟ್ವೀಟ್ ಮಾಡಿದ್ದಾರೆ.

ಕನದಾಸರು 16 ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜದ ಕನಸನ್ನು ಕಂಡಿದ್ದರು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ್ದ ಕನಕದಾಸರು, ಜಾತಿ, ಧರ್ಮ, ಲಿಂಗವನ್ನು ಮೀರಿದ್ದ ನಮೆಲ್ಲರಿಗೂ ಸೇರಿದವರಾಗಿದ್ದಾರೆ ಎಂದು ಚೇತನ್ ಹೇಳಿದ್ದಾರೆ. ಚೇತನ್ ಮಾಡಿರುವ ಈ ಟ್ವಿಟ್ ಮರ್ಮವೇನು ಎಂಬುದು ಗೊತ್ತಾಗಿಲ್ಲ.

ಕಳೆದ ಶನಿವಾರ ಟ್ವೀಟ್ ಮಾಡಿದ್ದ ಚೇತನ್, ಸಿದ್ದರಾಮಯ್ಯ ಕರ್ನಾಟಕ ಮತ್ತು ಕಾಂಗ್ರೆಸ್ ನ ಪ್ರಬಲ ನಾಯಕ. ಆದರೆ. ಬ್ರಾಹ್ಮಣ್ಯವನ್ನು ಆಳವಾಗಿ ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ ಎಂದಿದ್ದರು.

ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ಜಾತಿ ವಿರೋಧಿ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯ ಅವರ ಸೇವೆ ಹುಟ್ಟಿದ ಜಾತಿಗೆ ಮಾತ್ರ ಸೀಮಿತವಾಗಿದ್ದು, ಇತರೆ ಬಹುಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ