ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ: ಇಂದು 1,102 ಪ್ರಕರಣ ಪತ್ತೆ; 17 ಸಾವು, 4 ಜಿಲ್ಲೆಗಳಲ್ಲಿ ಪ್ರಕರಣ ಶೂನ್ಯ!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 1,102 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,58,090ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,458ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ. 

ಬೆಂಗಳೂರಿನಲ್ಲಿ ಇಂದು 338 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,40,310ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1,458 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,03,547ಕ್ಕೆ ಏರಿಕೆಯಾಗಿದೆ. ಇನ್ನು17,058 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,69,621 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,102 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.64ಕ್ಕೆ ಇಳಿದಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

SCROLL FOR NEXT