ಅಪರಿಚಿತರ ಗುಂಡಿಗೆ ಬಲಿಯಾದ ಎಮ್ಮೆ 
ರಾಜ್ಯ

ದಕ್ಷಿಣ ಕನ್ನಡ: ಬೆಳ್ತಂಗಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿಕ್ಕೆ ಎಮ್ಮೆ ಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಫಲಸ್ಥಡ್ಕದಲ್ಲಿ ಮಂಗಳವಾರ ಎಮ್ಮೆಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಫಲಸ್ಥಡ್ಕದಲ್ಲಿ ಮಂಗಳವಾರ ಎಮ್ಮೆಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. 

ಮಹದೇವ ಭಟ್ ಎಂಬುವರಿಗೆ ಸೇರಿದ 10 ವರ್ಷದ ಎಮ್ಮೆ ಹತ್ತಿರದ ಹೊಲದಲ್ಲಿ ಮೇಯುತ್ತಿತ್ತು. ರಾತ್ರಿ ವಾಪಸ್ ಎಮ್ಮೆ ಬಾರದಿದ್ದಾಗ ಮನೆಯವರು ಹುಡುಕಲು ಹೊರಟಾಗ  ಮಂಗಳವಾರ ಬೆಳಿಗ್ಗೆ ಫಲಸ್ಥಡ್ಕದಲ್ಲಿ ಅದರ ಮೃತದೇಹ ಪತ್ತೆಯಾಗಿದೆ.

ಮೃತದೇಹದ ಮೇಲೆ ಬುಲೆಟ್ ಗುರುತುಗಳಿದ್ದು, ಇದು ಬೇಟೆಗಾರರಿಗೆ ಬಲಿಯಾಗಿರಬಹುದು ಎಂದು ಸ್ಥಳೀಯ ಪೊಲೀಸರು ಶಂಕಿಸಿದ್ದಾರೆ. ಈ ಮಧ್ಯೆ ಧರ್ಮಸ್ಥಳ ಪೊಲೀಸರಿಗೆ ದೂರು ದಾಖಲಾಗಿದೆ. ಸ್ಥಳೀಯ ಪೊಲೀಸರೊಂದಿಗೆ ಉಪ್ಪಿನಂಗಡಿ ಅರಣ್ಯ ಅಧಿಕಾರಿಗಳು ಮತ್ತು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

SCROLL FOR NEXT