ಸಂಗ್ರಹ ಚಿತ್ರ 
ರಾಜ್ಯ

ಕಬ್ಬು ಎಫ್ಆರ್'ಪಿ ಅವೈಜ್ಞಾನಿಕವಾಗಿದ್ದು, ಮರುಪರಿಶೀಲನೆ ನಡೆಸಿ: ಸರ್ಕಾರಕ್ಕೆ ಕಬ್ಬು ಬೆಳೆಗಾರರ ಸಂಘ ಆಗ್ರಹ

ಕಬ್ಬು ಬೆಳೆಗೆ ನೀಡಲಾಗಿರುವ ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರ (ಎಫ್ಆರ್'ಪಿ) ಅವೈಜ್ಞಾನಿಕವಾಗಿದ್ದು, ಸರ್ಕಾರ ಕೂಡಲೇ ಇದನ್ನು ಮರುಪರಿಸೀಲಿಸಬೇಕು. ಇಲ್ಲದಿದ್ದರೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕಬ್ಬು ಬೆಳೆಗಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಕಬ್ಬು ಬೆಳೆಗೆ ನೀಡಲಾಗಿರುವ ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರ (ಎಫ್ಆರ್'ಪಿ) ಅವೈಜ್ಞಾನಿಕವಾಗಿದ್ದು, ಸರ್ಕಾರ ಕೂಡಲೇ ಇದನ್ನು ಮರುಪರಿಸೀಲಿಸಬೇಕು. ಇಲ್ಲದಿದ್ದರೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕಬ್ಬು ಬೆಳೆಗಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. 

ಈ ಕುರಿತು ಮಾತನಾಡಿರುವ ರಾಜ್ಯ ಕಬ್ಬು ಬೆಳೆಗಾರರ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಅವರು, ಕಬ್ಬು ಬೆಳೆಯಲು ಉತ್ಪಾದನಾ ವೆಚ್ಚ 3,200 ರೂ. ಆಗುತ್ತದೆ ಎಂದು ಸ್ವತಃ ಸರ್ಕಾರದ ಕೃಷಿ ಇಲಾಖೆ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ವರದಿ ಸಲ್ಲಿಸಿವೆ. ಆದರೆ, ಟನ್‌ಗೆ ಕೇವಲ 50 ರೂ. ಎಫ್ಆರ್‌ಪಿ ನೀಡಿರುವುದು ಅವೈಜ್ಞಾನಿಕ ಕ್ರಮವಾಗಿದೆ. ತಿಂಗಳಲ್ಲಿ ಮರುಪರಿಶೀಲಿಸಿ, ನ್ಯಾಯಸಮ್ಮತ ದರ ನಿಗದಿ ಮಾಡಬೇಕು. ಇಲ್ಲದಿದ್ದರೆ, ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ. 

ಕೇಂದ್ರ ಸರ್ಕಾರ ಸಕ್ಕರೆ ಕಾರ್ಖಾನೆಗಳ ಒತ್ತಡಕ್ಕೆ ಮಣಿದು, ಕಬ್ಬು ಬೆಳೆಗಾರರಿಗೆ ಅನ್ಯಾಯ ಮಾಡುತ್ತಿದೆ. ವರ್ಷಕ್ಕೆ ಹತ್ತಾರು ಬಾರಿ ಪೆಟ್ರೋಲ್‌-ಡೀಸೆಲ್‌ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಸರ್ಕಾರ, ಮೂರು ವರ್ಷಗಳಿಂದಲೂ ಕಬ್ಬಿನ ಎಫ್ಆರ್‌ಪಿ ದರವನ್ನು ನಿಗದಿ ಮಾಡಿಲ್ಲ. ಈಗ ಕೇವಲ 50ರೂ ಏರಿಕೆ ಮಾಡಿ ರೈತರಿಗೆ ನಿರಾಸೆ ಉಂಟುಮಾಡಿದೆ. ಕೂಡಲೇ ಪುನರ್‌ ಪರಿಶೀಲಿಸಿ ಕೃಷಿ ಇಲಾಖೆ ಪ್ರಕಾರ ಟನ್‌ ಕಬ್ಬು ಬೆಳೆಯಲು ಉತ್ಪಾದನಾ ವೆಚ್ಚ 3,200 ರೂ. ಆಗುತ್ತದೆ. ಇದಕ್ಕೆ ಲಾಭ ಸೇರಿಸಿ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ಕಬ್ಬು ಬೆಳೆಗಾರರಿಗೆ ಸಕ್ಕರೆ ಇಳುವರಿಯಲ್ಲಿ ಮೋಸ, ತೂಕದಲ್ಲಿ ಮೋಸ, ಹಣ ಪಾವತಿ ವಿಳಂಬ ಮತ್ತು ಮೋಸ, ಅಷ್ಟೇ ಅಲ್ಲ ದರ ನಿಗದಿಯಲ್ಲಿಯೂ ಮೋಸವಾಗುತ್ತಿದೆ. ಎಥನಾಲ್‌ ಉತ್ಪಾದನೆಯಿಂದ ಬರುವ ಲಾಭವನ್ನು ರೈತರಿಗೆ ಹಂಚಿಕೆ ಮಾಡುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರಗಳು ಸಕ್ಕರೆ ಕಂಪನಿಯ ಮಾಲೀಕರ ಹಂಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರಣ ರೈತರ ನಿರಂತರ ಶೋಷಣೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ದ್ರೋಹ ಮಾಡುತ್ತಿದ್ದರೂ, ನಮ್ಮ ಸಂಸದರು ಮೌನವಾಗಿರುವುದು ಖಂಡನೀಯ. ಕೇಂದ್ರದ ಧೋರಣೆ ಖಂಡಿಸಿ ರಾಷ್ಟ್ರಮಟ್ಟದ ಸಂಯುಕ್ತ ಕಿಸಾನ್‌ ಮೋರ್ಚಾ ಸೆ. 27ರಂದು ಕರೆ ನೀಡಿರುವ ಭಾರತ ಬಂದ್‌ಗೆ ಕಬ್ಬು ಬೆಳೆಗಾರರ ಸಂಘ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ. ಆದರೆ ರಾಜ್ಯದಲ್ಲಿ ಎಲ್ಲ ಜನಪರ ರೈತ ಸಂಘಟನೆಗಳು ಸದ್ಯದಲ್ಲಿಯೇ ಸಭೆ ನಡೆಸಿ ಚರ್ಚಿಸಿ ಬೆಲೆ ಏರಿಕೆ ವಿರೋಧಿಸಿ, ಮಹದಾಯಿ ನದಿ ನೀರಿನ ವಿವಾದ ಮೇಕೆದಾಟು ಯೋಜನೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕದಲ್ಲಿ ವಿಭಿನ್ನ ರೀತಿಯ ಬಂದ್‌ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT