ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಸಕ್ತ ವರ್ಷ ಮೊದಲ ತ್ರೈಮಾಸಿಕದಲ್ಲಿ 62 ಸಾವಿರ ಕೋಟಿ ರೂ. ಎಫ್ ಡಿಐ ಆಕರ್ಷಿಸುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ

ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ಉತ್ತುಂಗದ ನಡುವೆಯೂ ರಾಜ್ಯ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 62. 085 ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಿಸಿದೆ. 

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ಉತ್ತುಂಗದ ನಡುವೆಯೂ ರಾಜ್ಯ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 62. 085 ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಿಸಿದೆ.  ಮುಂದಿನ ವರ್ಷದ ಫೆಬ್ರವರಿಯಲ್ಲಿ ವಿಶ್ವ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜನೆಗೆ ಸಿದ್ಧತೆ ನಡೆಯುತ್ತಿರುವಂತೆಯೇ, ರಾಜ್ಯದ ಈ ಸಾಧನೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮತ್ತಷ್ಟು ಬಲ ಬಂದಂತಾಗಿದೆ. 

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, 2019-20ರಲ್ಲಿ 30,746 ಕೋಟಿ ಆಕರ್ಷಣೆಯೊಂದಿಗೆ ಮೂರನೇ ಸ್ಥಾನದಲ್ಲಿದ್ದ ರಾಜ್ಯ 2020-21 ರಲ್ಲಿ 56, 884 ಕೋಟಿ ಬಂಡವಾಳವನ್ನು ಆಕರ್ಷಿಸಿದೆ ಎಂದರು.

ಕೈಗಾರಿಕಾ ಬೆಳವಣಿಗೆಗೆ ಭೂಮಿ ಮತ್ತು ಕಾರ್ಮಿಕ ಕಾನೂನು, ಅಫಿಡವಿಟ್ ಆಧಾರಿತ ಕ್ಲಿಯರೆನ್ಸ್ ಸೇರಿದಂತೆ ಅನೇಕ ಸುಧಾರಣೆಗಳನ್ನು ರಾಜ್ಯ ಸರ್ಕಾರ ಮಾಡಿದೆ. ಮುಂಬರುವ ದಿನಗಳಲ್ಲಿ ಎಲ್ಲಾ ಅಂಶಗಳಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಿರುವುದಾಗಿ ನಿರಾಣಿ ಭರವಸೆ ನೀಡಿದರು. 

ರಾಷ್ಟ್ರೀಯ ಹೂಡಿಕೆ ಉತ್ತೇಜನ ಮತ್ತು ಪೂರಕ ಸೌಲಭ್ಯ ಒದಗಿಸುವ ಏಡಜೆನ್ಸಿ, ಇನ್ವೆಸ್ಟ್ ಇಂಡಿಯಾದ ರಾಜ್ಯವಾರು ಐಪಿಎ( ಹೂಡಿಕೆ ಪ್ರಚಾರ ಏಜೆನ್ಸಿ) ಶ್ರೇಯಾಂಕದಡಿ ಕರ್ನಾಚಕ ಉದ್ಯೋಗ ಮಿತ್ರ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ನಿರ್ವಹಣೆ ಮಾಡಿದೆ ಎಂದರು.

ದೇಶದ ಒಟ್ಟು  20 ರಾಜ್ಯಗಳ ಸಾಧನೆಯನ್ನು ಪರಗಣಿಸಿ ಈ ಶ್ರೇಯಾಂಕ ನೀಡಲಾಗಿದೆ. ಹೂಡಿಕೆ ಉತ್ತೇಜನ ಪ್ರಚಾರಕ್ಕೆ ಸಂಬಂಧಿಸಿದ ಒಟ್ಟು 8 ವಿಭಾಗಗಳ ಪೈಕಿ ಶೇ. 4ರಲ್ಲಿ ಕರ್ನಾಟಕ ಉದ್ಯೋಗ ಮಿತ್ರ ಶೇಕಡಾ 100 ಅಂಕಗಳನ್ನು ಪಡೆದಿದೆ ಎಂದು ಅವರು ತಿಳಿಸಿದರು. 

ಕೈಗಾರಿಕಾ ಉದ್ದೇಶಗಳಿಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಪಡೆದ ಜಮೀನು ಬಳಕೆ ಮಾಡದವರಿಗೆ ನೋಟಿಸುವ ನೀಡಲಾಗುವುದು, ಕೈಗಾರಿಕಾ ಉದ್ದೇಶಕ್ಕೆ ಜಮೀನು ಪಡೆದು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದರೆ ಅಂತಹ  ಜಮೀನನ್ನೂ ಹಿಂದಕ್ಕೆ ಪಡೆಯಲಾಗುವುದು ಎಂದು ಮುರುಗೇಶ್ ನಿರಾಣಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT