ಕಳ್ಳರ ಗ್ಯಾಂಗ್ ನಿಂದ ಚಿನ್ನಾಭರಣ ಮತ್ತು ಗನ್ ವಶ 
ರಾಜ್ಯ

ಬೆಂಗಳೂರು: ನಕಲಿ ಗನ್ ತೋರಿಸಿ ರೈಲಿನಲ್ಲೇ ಮಹಿಳೆಯನ್ನು ದೋಚಿದ್ದ ಆರೋಪಿ ಬಂಧನ

ನಕಲಿ ಪಿಸ್ತೂಲ್ ಗಳನ್ನು ತೋರಿಸಿ ರೈಲಿನಲ್ಲೇ ಪ್ರಯಾಣಿಕ ಮಹಿಳೆಯನ್ನು ದೋಚಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ನಕಲಿ ಪಿಸ್ತೂಲ್ ಗಳನ್ನು ತೋರಿಸಿ ರೈಲಿನಲ್ಲೇ ಪ್ರಯಾಣಿಕ ಮಹಿಳೆಯನ್ನು ದೋಚಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಶೇಷಾಂದ್ರಿಪುರಂ ಬಳಿ ಈ ಘಟನೆ ನಡೆದಿದ್ದು, ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಜಾಗವಿಲ್ಲದಿದ್ದಾಗ, ತುಮಕೂರು ಕಡೆಯಿಂದ ಬರುವ ರೈಲುಗಳನ್ನು ಶೇಷಾದ್ರಿಪುರ ಬಳಿ ಕೆಲ ನಿಮಿಷ ನಿಲ್ಲಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಬೋಗಿ ಏರುತ್ತಿದ್ದ ಆರೋಪಿಗಳು,  ಒಂಟಿಯಾಗಿದ್ದವರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದರು. ಘಟನೆ ಸಂಬಂಧ ಇದೀಗ ಬಿಹಾರದ ರವಿ ಸಿಂಗ್ (27 ವರ್ಷ) ಹಾಗೂ ಉತ್ತರ ಪ್ರದೇಶದ ಸಂದೀಪ್ ಅಲಿಯಾಸ್ ರಜಪೂತ್ ಸಿಂಗ್ (32 ವರ್ಷ) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ ಸುಮಾರು 3 ಲಕ್ಷ ರೂ ಮೌಲ್ಯದ  ಚಿನ್ನಾಭರಣ ಹಾಗೂ ನಕಲಿ ಪಿಸ್ತೂಲ್ ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಬೆಂಗಳೂರು ರೈಲ್ವೆ ಪೊಲೀಸರು ಹೇಳಿದ್ದಾರೆ.

ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿಗಳು, ಬಾರ್, ಗ್ಯಾರೇಜ್ ಹಾಗೂ ಇತರೆಡೆ ಕೆಲಸ ಮಾಡುತ್ತಿದ್ದರು. ಅಕ್ರಮವಾಗಿ ಹಣ ಸಂಪಾದಿಸಲು ಮುಂದಾಗಿದ್ದ ಆರೋಪಿಗಳು, ಸುಲಿಗೆ ಮಾಡಲು ಸಂಚು ರೂಪಿಸಿದ್ದರು. ಅದಕ್ಕಾಗಿ ನಕಲಿ ಪಿಸ್ತೂಲ್ ಗಳನ್ನು ಕೂಡ ಖರೀದಿಸಿದ್ದರು.ಆ. 22, 25 ಹಾಗೂ 30ರಂದು  ಆರೋಪಿಗಳು ಕೃತ್ಯ ಎಸಗಿದ್ದರು. ಈ ಬಗ್ಗೆ ಪ್ರಕರಣಗಳೂ ದಾಖಲಾಗಿದ್ದವು. ತನಿಖೆ ಕೈಗೊಂಡಿದ್ದ ವಿಶೇಷ ತಂಡ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದೂ ಹೇಳಿದರು.

ಬೋಗಿಯಲ್ಲಿ ಇರುತ್ತಿದ್ದ ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಆರೋಪಿಗಳು ಕೃತ್ಯ ಎಸಗುತ್ತಿದ್ದರು. ಮಹಿಳೆಯರ ಹಣೆಗೆ ನಕಲಿ ಪಿಸ್ತೂಲ್ ಹಿಡಿದು, 10 ಎಣಿಸುವ ಮುಂಚೆ ಚಿನ್ನಾಭರಣ ಹಾಗೂ ನಗದು ನೀಡುವಂತೆ ಒತ್ತಾಯಿಸುತ್ತಿದ್ದರು. ಜೀವಭಯದಿಂದ ಮಹಿಳೆಯರು, ಚಿನ್ನಾಭರಣ ಬಿಚ್ಚಿ ಕೊಡುತ್ತಿದ್ದರು.  ವಿರೋಧ ವ್ಯಕ್ತಪಡಿಸಿದರೆ, ಆರೋಪಿಗಳೇ ಚಿನ್ನಾಭರಣ ಕಿತ್ತುಕೊಳ್ಳುತ್ತಿದ್ದರು. ನಾವು ಆರೋಪಿಗಳ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಪೊಲೀಸರು ಹೇಳಿದರು.


ಈ ದರೋಡೆ ಜೋಡಿ ಬಂಧನದೊಂದಿಗೆ ಮಹಿಳೆಯರು ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT