ಸ್ವರ್ಣಗೌರಿ ದೇವಾಲಯ 
ರಾಜ್ಯ

ಚಾಮರಾಜನಗರ: ಕೋವಿಡ್ 3ನೇ ಅಲೆ ಭೀತಿ; ರಾಜ್ಯದ ಏಕೈಕ ಗೌರಿ ದೇವಾಲಯ ಈ ಬಾರಿಯೂ ಬಂದ್

ರಾಜ್ಯದ ಏಕೈಕ ಗೌರಿ ದೇವಾಲಯ ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ಬಂದ್ ಆಗಿದೆ. ಚಾಮರಾಜನಗರ ಜಿಲ್ಲೆ ಕುದೇರು ಗ್ರಾಮದಲ್ಲಿ ಸ್ವರ್ಣಗೌರಿ ದೇವಾಲಯವಿದ್ದು  ಗೌರಿ ಹಬ್ಬದ ಸಂಭ್ರಮ ಮಾಯವಾಗಿದೆ.‌ 

ಚಾಮರಾಜನಗರ: ರಾಜ್ಯದ ಏಕೈಕ ಗೌರಿ ದೇವಾಲಯ ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ಬಂದ್ ಆಗಿದೆ. ಚಾಮರಾಜನಗರ ಜಿಲ್ಲೆ ಕುದೇರು ಗ್ರಾಮದಲ್ಲಿ ಸ್ವರ್ಣಗೌರಿ ದೇವಾಲಯವಿದ್ದು  ಗೌರಿ ಹಬ್ಬದ ಸಂಭ್ರಮ ಮಾಯವಾಗಿದೆ.‌ 

ಪ್ರತಿ ವರ್ಷ ಬಾಗಿನ ಅರ್ಪಿಸಿ  ಹಬ್ಬ ಆಚರಿಸುತ್ತಿದ್ದ ಗೃಹಿಣಿಯರಿಗೆ ಕೊರೋನಾ ಸತತ ಎರಡನೇ ವರ್ಷವೂ ನಿರಾಸೆ ಉಂಟು ಮಾಡಿದೆ. ಎಲ್ಲಾ ಕಡೆ ಗಣೇಶನಿಗೆ ಅಗ್ರ ಪೂಜೆಯಾದರೆ  ಕುದೇರು ಗ್ರಾಮದಲ್ಲಿ ಮಾತ್ರ ಗೌರಿಗೇ ಮೊದಲ ಪ್ರಾಶಸ್ತ್ಯ. ರಾಜ್ಯದಲ್ಲೇ ಗೌರಿ ದೇವಾಲಯ ಇರುವ ಏಕೈಕ ಗ್ರಾಮ ಇದಾಗಿದೆ.  ಹಾಗೆಯೇ ನಾಡಿನ ಎಲ್ಲಾ ಕಡೆ ಗಣೇಶನನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸುವುದು ವಾಡಿಕೆಯಾದರೆ ಈ ಗ್ರಾಮದಲ್ಲಿ ಮಾತ್ರ ಗೌರಿಯನ್ನು ಪ್ರತಿಷ್ಠಾಪಿಸಿ 12 ದಿನಗಳ ಕಾಲ ವಿಜೃಂಭಣೆಯಿಂದ ಪೂಜೆ-ಪುನಸ್ಕಾರಗಳನ್ನು ಮಾಡಿ ನಂತರ ವಿಸರ್ಜಿಸಲಾಗುತ್ತಿತ್ತು.

ಕುದೇರು ಗ್ರಾಮದಲ್ಲಿ  ನಡೆಯುವ ಈ ಗೌರಿ ಹಬ್ಬಕ್ಕೆ  ಹಳೇ ಮೈಸೂರು ಪ್ರಾಂತ್ಯ ಹಾಗೂ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಮಂದಿ ಆಗಮಿಸುತ್ತಿದ್ದರು. 12 ದಿನಗಳ ಕಾಲ ಸಂಭ್ರಮವೋ ಸಂಭ್ರಮ. ಆದರೆ ಕೋವಿಡ್-19 ನಿಂದ ಈ ಬಾರಿಯು ಇದಕ್ಕೆಲ್ಲ ಕಡಿವಾಣ ಬಿದ್ದಿದೆ.

ಸಾಮಾನ್ಯವಾಗಿ ಗೌರಿಗೆ ಎಲ್ಲಿಯೂ ದೇವಾಲಯವಿಲ್ಲ. ಆದರೆ, ಕುದೇರು ಗ್ರಾಮದಲ್ಲಿ 107 ವರ್ಷಗಳ ಹಿಂದೆಯೇ ಸ್ವರ್ಣಗೌರಿ ದೇವಾಲಯ ನಿರ್ಮಿಸಲಾಗಿದೆ. ನಾಡಿನ ಎಲ್ಲಾ ಕಡೆ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸಿದರೆ  ಕುದೇರು ಗ್ರಾಮದಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ. 

ಈ ಗೌರಮ್ಮನಿಗೆ ಹರಕೆ ಹೊತ್ತುಕೊಂಡರೆ ಎಲ್ಲಾ ಇಷ್ಟಾರ್ಥಗಳು ಸಿದ್ದಿಸುತ್ತವೆ ಎಂಬ ನಂಬಿಕೆಯಿದೆ. ಅದರಲ್ಲೂ ವಿಶೇಷವಾಗಿ ಕಂಕಣಭಾಗ್ಯ, ಸಂತಾನಭಾಗ್ಯ  ವಿವಾಹಿತರಿಗೆ ಮುತ್ತೈದೆ ಭಾಗ್ಯ ಲಭಿಸುತ್ತದೆ ಎಂಬ ನಂಬಿಕೆಯಿಂದ ರಾಜ್ಯದ ವಿವಿಧೆಡೆಯಿಂದ ಇಲ್ಲಿಗೆ ಭಕ್ತರ ದಂಡೇ ಹರಿದು ಬರುತ್ತಿತ್ತು. ಇಷ್ಟಾರ್ಥ ಸಿದ್ದಿಸಿದವರು ಗೌರಿಗೆ ಬಾಗಿನ ಅರ್ಪಿಸಿ ತಮ್ಮ ಹರಕೆ  ತೀರಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT