ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿಯಲ್ಲಿ ಮತಾಂತರ ಆರೋಪ: ಹಿಂದೂ ಜಾಗರಣಾ ವೇದಿಕೆ ಸದಸ್ಯರಿಂದ ಚರ್ಚ್ ಮೇಲೆ ದಾಳಿ

ಅಕ್ರಮವಾಗಿ  ಹಿಂದೂ ಧರ್ಮದ ಮಕ್ಕಳು ಮತ್ತು ಮಹಿಳೆಯರನ್ನು ಕೂಡಿ ಹಾಕಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ: ಅಕ್ರಮವಾಗಿ  ಹಿಂದೂ ಧರ್ಮದ ಮಕ್ಕಳು ಮತ್ತು ಮಹಿಳೆಯರನ್ನು ಕೂಡಿ ಹಾಕಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರಿನ ನಕ್ರೆ ಆನಂದಿ ಮೈದಾನದಲ್ಲಿರುವ ಪ್ರಗತಿ ಸೆಂಟರ್ ಮೇಲೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದು, ಇಲ್ಲಿ ಹಲವಾರು ವರ್ಷಗಳಿಂದ ಮತಾಂತರ ನಡೆಯುತ್ತಿದೆ. ನೂರಾರು ಹಿಂದೂಗಳನ್ನು ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿವೆ ಎಂದು ದಾಳಿ ನಡೆಸಿರುವವರು ಆರೋಪಿಸಿದ್ದಾರೆ. 

ಪ್ರಗತಿ ಸೆಂಟರ್ ಮೇಲೆಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಏಕಾಏಕಿ ನುಗ್ಗಿದ ಕೂಡಲೇ ಪರಿಸ್ಥಿತಿ ಬಿಗಡಾಯಿಸಿದ್ದು, ಕೇಂದ್ರದಲ್ಲಿದ್ದ ಪ್ರಾರ್ಥನಾ ನಿರತರು ಹಾಗೂ ದಾಳಿಗಾರರ ನಡುವೆ ವಾಗ್ವಾದ ನಡೆದು ಸಂಘರ್ಷಕ್ಕೆ ಕಾರಣವಾಗಿದೆ.

ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಉಡುಪಿ ಜಿಲ್ಲೆಯ ಕುಕ್ಕುಂದೂರು ನಕ್ರೆ ಆನಂದಿ ಮೈದಾನದಲ್ಲಿರುವ ಸದರಿ ಕೇಂದ್ರದಲ್ಲಿ ಅನೇಕ ಸಮಯದಿಂದ ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಬೆನಡಿಕ್ಟ್ ನೇತೃತ್ವದಲ್ಲಿ ಮತಾಂತರ ಕಾರ್ಯ ನಡೆಯುತ್ತಿದೆ. ಯಾವುದೇ ಅನುಮತಿ ಪಡೆಯದೇ ಅಕ್ರಮವಾಗಿ ಪ್ರಾರ್ಥನಾಲಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದಾರೆ. 

ಉಡುಪಿಯಲ್ಲಿ ಹಲವಾರು ವರ್ಷಗಳಿಂದ ಮತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ನೂರಾರು ಹಿಂದೂಗಳನ್ನು ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿವೆ. ಕಳೆದ ಹತ್ತು ವರ್ಷಗಳಿಂದ ಮತಾಂತರ ಕೆಲಸದಲ್ಲಿ ನಿರತವಾಗಿರುವ ಪ್ರಗತಿ ಸೆಂಟರ್ ಸಂಪೂರ್ಣ ಅಕ್ರಮವಾಗಿದ್ದು, ಯಾವುದೇ ಅನುಮತಿ ಪಡೆಯದೇ ಇದನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಾರ್ಥನಾ ನಿರತರ ಹಲ್ಲೆ ನಡೆಸಲಾಗಿದೆ ಎಂದು ಬೆನಡಿಕ್ಟ್ ಎಂಬುವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು, 15 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಇನ್ನೊಂದೆಡೆ ಸುನೀಲ್ ಎಂಬುವರು ಪ್ರತಿ ದೂರು ನೀಡಿದ್ದು ‌ಬೆನಡಿಕ್ಟ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT