ಸಂಗ್ರಹ ಚಿತ್ರ 
ರಾಜ್ಯ

ಸಕಲೇಶಪುರ: ಗಣೇಶ ವಿಸರ್ಜನೆ ವೇಳೆ ಪೊಲೀಸರು-ಭಜರಂಗ ದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ!

ಸಕಲೇಶಪುರದಲ್ಲಿ ಗಣೇಶ ವಿಸರ್ಜನೆ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಯುವಕರ ಗುಂಪು ಪೊಲೀಸರನ್ನೇ ತಳ್ಳಾಡಿದ ಘಟನೆ ನಡೆದಿದೆ.

ಹಾಸನ: ಸಕಲೇಶಪುರದಲ್ಲಿ ಗಣೇಶ ವಿಸರ್ಜನೆ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಯುವಕರ ಗುಂಪು ಪೊಲೀಸರನ್ನೇ ತಳ್ಳಾಡಿದ ಘಟನೆ ನಡೆದಿದೆ. 

ಗಣೇಶ ವಿಸರ್ಜನೆ ವೇಳೆ ನಡೆಯುತ್ತಿದ್ದ ಡಿಜೆ ಡ್ಯಾನ್ಸ್ ತಡೆಯಲು ಸಬ್ ಇನ್ಸ್​ಪೆಕ್ಟರ್​ ಬಸವರಾಜು ಮತ್ತು ಚಿಂಚೋಳಿ ಪಿಎಸ್ಐ ಮುಂದಾಗಿದ್ದು, ಈ ವೇಳೆ ಯುವಕರ ಗುಂಪು ಸಬ್ ಇನ್ಸ್​ಪೆಕ್ಟರ್ ಮತ್ತು ಪಿಎಸ್ಐ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆಂದು ತಿಳಿದುಬಂದಿದೆ. 

ಭಜರಂಗ ದಳದ ರಘು ಮತ್ತು ಅವರ ಸಂಗಡಿಗರು ಡಿಜೆ ಡ್ಯಾನ್ಸ್ ತಡೆಯಲು ಮುಂದಾದ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಬ್ಯಾಂಡ್ ಬಾರಿಸದಂತೆ ಪಿಎಸ್ಐ ಕೋಲು ಕಸಿದುಕೊಂಡಿದ್ದು, ಬಳಿಕ ಸಬ್ ಇನ್ಸ್​​ಪೆಕ್ಟರ್​ ಕೈಯಲ್ಲಿದ್ದ ಬ್ಯಾಂಡ್ ಸೆಟ್ ಕೋಲನ್ನು ಯುವಕನೊಬ್ಬ ಕಸಿದುಕೊಂಡಿದ್ದಾರೆ. 

ಸರ್ಕಾರದ ನಿಯಮದಂತೆ ಪೊಲೀಸರು ಡಿಜೆ ತಡೆಯಲು ಮುಂದಾಗಿದ್ದಾರೆ. ಆದರೆ, ಯುವಕರು ಇದಕ್ಕೆ ವಿರುದ್ಧವಾಗಿ ವರ್ತನೆ ತೋರಿದ್ದಾರೆ. ಬಳಿಕ ಪೊಲೀಸರು ಕೆಲ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಮೆರವಣಿಗೆ ವೇಳೆ ಸರ್ಕಾರಿ ನೌಕರರೊಬ್ಬರೂ ಕೂಡ ಭಾಗಿಯಾಗಿದ್ದು, ಪೊಲೀಸ್ ಪೇದೆಯನ್ನು ತಳ್ಳಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT