ಸಾಂದರ್ಭಿಕ ಚಿತ್ರ 
ರಾಜ್ಯ

ಕೇವಲ 24 ಗಂಟೆಗಳಲ್ಲೇ ಭೂಪರಿವರ್ತನೆ, ನಿಯಮ ಸರಳೀಕರಣ ನಿಟ್ಟಿನಲ್ಲಿ ಪ್ರಯತ್ನ: ಆರ್. ಅಶೋಕ್

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ ನೀಡುವ ಸಲುವಾಗಿ ಮತ್ತು ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ನಿಯಮವನ್ನು ಸರಳಗೊಳಿಸಿದ್ದು ಕೇವಲ 24 ಗಂಟೆಗಳಲ್ಲೇ ಭೂ ಪರಿವರ್ತನೆ ಮಾಡಲಾಗುವುದು

ಬೆಂಗಳೂರು: ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ ನೀಡುವ ಸಲುವಾಗಿ ಮತ್ತು ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ನಿಯಮವನ್ನು ಸರಳಗೊಳಿಸಿದ್ದು ಕೇವಲ 24 ಗಂಟೆಗಳಲ್ಲೇ ಭೂ ಪರಿವರ್ತನೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅಶೋಕ್, ಇದು ಹಲವು ರೈತರ ಪ್ರಮುಖ ಸಮಸ್ಯೆಯಾಗಿದೆ, ಈ ಸಂಬಂಧ ಸಭೆ ಕರೆಯಲಾಗಿದ್ದು ಇಡೀ ಪ್ರಕ್ರಿಯೆಯನ್ನು ಸರಳಗೊಳಿಸಲು ನಿರ್ಧರಿಸಲಾಗಿದೆ. 

ಕೃಷಿ ಭೂಮಿ ಪರಿವರ್ತನೆಯ ಸಂಬಂಧ ಹಲವು ದೂರುಗಳು ಕೇಳಿ ಬರುತ್ತಿವೆ. ಹೊಸದಾಗಿ ರೂಪಿಸಿರುವ ನಿಯಾಮಾವಳಿಯಿಂದ ಪ್ರಕ್ರಿಯೆ ಸರಳಗೊಳ್ಳಲಿದೆ, ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹೊಸ ಪ್ರಕ್ರಿಯೆಯ ಪ್ರಕಾರ ಕಂದಾಯ ಇಲಾಖೆಯು ಭೂ ಪರಿವರ್ತನೆಗೆ ಅರ್ಜಿಯನ್ನು ಉಪ ಆಯುಕ್ತರಿಂದ ಯೋಜನಾ ಪ್ರಾಧಿಕಾರಕ್ಕೆ ಕಳುಹಿಸುತ್ತದೆ, ನಂತರ ಕಡತವು ಎಲ್ಲಾ ಭೂ ಸ್ವಾಧೀನ ಅಧಿಕಾರಿಗಳಿಗೆ, ತಹಶೀಲ್ದಾರ್‌ಗೆ, ಹಾಗೂ ಕಂದಾಯ ನಿರೀಕ್ಷಕರಿಗೆ ಮತ್ತು ಅಂತಿಮವಾಗಿ ಗ್ರಾಮ ಲೆಕ್ಕಿಗರಿಗೆ ಕಳುಹಿಸಲಾಗುತ್ತದೆ.

ಭೂಮಿಯನ್ನು ಪರಿವರ್ತಿಸುವ ಹೊತ್ತಿಗೆ, ಸುಮಾರು ಆರು ತಿಂಗಳು ಸಮಯವಾಕಾಶ ತೆಗೆದುಕೊಳ್ಳುತ್ತದೆ ಮತ್ತು ಬಹುಸಂಖ್ಯೆಯ ವರದಿಗಳು ಬೇಕಾಗುತ್ತವೆ ಎಂದು ಅಶೋಕ ಹೇಳಿದ್ದಾರೆ, ಪ್ರಸ್ತುತ ವ್ಯವಸ್ಥೆಯನ್ನು ಬದಲಿಸಲು ತಿದ್ದುಪಡಿಯನ್ನು ಅಂಗೀಕರಿಸುವ ಅಗತ್ಯವಿದೆ, ಖಾತಾ ಅಪ್‌ಡೇಟ್ ಮಾಡದಿರುವ ಮತ್ತು ಪೌತಿ-ಆನುವಂಶಿಕತೆಯನ್ನು ಸರಿಯಾಗಿ ನಡೆಸದ ಅನೇಕ ಉದಾಹರಣೆಗಳಿವೆ. ಪೌತಿ ಸೃಷ್ಟಿ ಸರಾಗವಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ನಾವು ಒಂದು ವಿಧಾನವನ್ನು ರೂಪಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಆಸ್ತಿ ದಾಖಲೆಗಳಲ್ಲಿ ಸಮಸ್ಯೆಗಳಿದ್ದರೇ, ಸಹಾಯಧನಕ್ಕೆ ಅರ್ಹರಾದ ರೈತರು ಪ್ರತಿ ವರ್ಷ ಕೇಂದ್ರದಿಂದ 6,000 ಮತ್ತು ರಾಜ್ಯದಿಂದ 4,000 ರು ಹಣ ಪಡೆಯುವುದಿಲ್ಲ. ಅವರು ಸಬ್ಸಿಡಿಗಳನ್ನೂ ಕಳೆದುಕೊಳ್ಳುತ್ತಾರೆ. ಪ್ರಕ್ರಿಯೆಯನ್ನು ಸರಳಗೊಳಿಸುವ ಮೂಲಕ ನಾನು ಈ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇನೆ ಎಂದು ಅಶೋಕ ಹೇಳಿದರು.

ಮಹತ್ವಾಕಾಂಕ್ಷೆಯ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು  ಮತ್ತೆ ಆರಂಭಿಸಲಾಗುವುದು. ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು ಅವರ ಮನೆಬಾಗಿಲಿಗೆ ತೆರಳಿ ಪರಿಹರಿಸಲಾಗುವುದು ಎಂದು ಹೇಳಿದ್ದಾರೆ, ಸಾಂಕ್ರಾಮಿಕ ರೋಗದ ಕಾರಣ ಯೋಜನೆ ಪ್ರಾರಂಭವಾದ ನಂತರ ಅದನ್ನು ನಿಲ್ಲಿಸಬೇಕಾಯಿತು ಎಂದು ತಿಳಿಸಿದರು.

ವೃದ್ಧಾಪ್ಯ ವೇತನವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಪ್ರಸ್ತಾವನೆಯನ್ನು ನಾವು ರೂಪಿಸುತ್ತಿದ್ದೇವೆ. ಇದರಿಂದ 30,000 ಪಿಂಚಣಿದಾರರಿಗೆ ಅನುಕೂಲವಾಗಲಿದೆ. 60 ವರ್ಷಕ್ಕಿಂತ ಮೇಲ್ಪಟ್ಟ ಇನ್ನೂ ಎರಡು ಲಕ್ಷ ಪಿಂಚಣಿದಾರರು ಸ್ವಯಂಚಾಲಿತವಾಗಿ ಹಣವನ್ನು ಸ್ವೀಕರಿಸುತ್ತಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT