ಸಾಂದರ್ಭಿಕ ಚಿತ್ರ 
ರಾಜ್ಯ

ವಾರದೊಳಗೆ ಗುಂಡಿಮುಕ್ತ ರಸ್ತೆ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬಿಬಿಎಂಪಿ ಭರವಸೆ

ಸೆಪ್ಟೆಂಬರ್ 20ರೊಳಗೆ ಬೆಂಗಳೂರು ನಗರ ಗುಂಡಿ ಮುಕ್ತ ರಸ್ತೆಯನ್ನು  ಹೊಂದಲಿದೆ ಎಂದು ಬಿಬಿಎಂಪಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಭರವಸೆ ನೀಡಿದೆ.

ಬೆಂಗಳೂರು: ಸೆಪ್ಟೆಂಬರ್ 20ರೊಳಗೆ ಬೆಂಗಳೂರು ನಗರ ಗುಂಡಿ ಮುಕ್ತ ರಸ್ತೆಯನ್ನು  ಹೊಂದಲಿದೆ ಎಂದು ಬಿಬಿಎಂಪಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಭರವಸೆ ನೀಡಿದೆ.

ವಿಕಾಸಸೌಧದಲ್ಲಿ ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಡಿಎ, ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ಸಂಚಾರ ಪೊಲೀಸ್ ಪ್ರತಿನಿಧಿಗಳೊಂದಿಗೆ ನಡೆದ ಸಮನ್ವಯ ಸಮಿತಿಯ ಸಭೆಯಲ್ಲಿ, ಹಾನಿಗೊಳಗಾದ ನಗರದ ರಸ್ತೆಗಳನ್ನು ಒಂದು ವಾರದೊಳಗೆ ಸರಿಪಡಿಸಲಾಗುವುದು ಎಂದು ಬಿಬಿಎಂಪಿ ಎಲ್ಲರಿಗೂ ಭರವಸೆ ನೀಡಿದೆ.

ಆಯಾ ವಲಯ ಎಂಜಿನಿಯರ್‌ಗಳು ನಗರದ ಇತರ ರಸ್ತೆಗಳನ್ನು  ನೋಡಿಕೊಳ್ಳುತ್ತಾರೆ ಮತ್ತು ಅವುಗಳನ್ನು ಗುಂಡಿ-ಮುಕ್ತಗೊಳಿಸುತ್ತಾರೆ ಎಂದು ಸಭೆಯಲ್ಲಿ ಪಾಲ್ಗೊಂಡವರು ಹೇಳಿದರು. 

ಬೀದಿ ದೀಪಗಳ ವಿಷಯದಲ್ಲಿ ಸಂಚಾರ ವಿಭಾಗವು ನಗರದ ಕತ್ತಲೆ ಪ್ರದೇಶಗಳನ್ನು ಗುರುತಿಸುತ್ತದೆ ಮತ್ತು ಈ ವಿಚಾರದ ಬಗ್ಗೆ  ಎರಡು ವಾರಗಳ ನಂತರ ಮುಂದಿನ ಸಮನ್ವಯ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ  'ರಾಜ್ಯದ ಭವಿಷ್ಯದ ವಿಷನ್ 2020 ಗಾಗಿ ಪ್ರಸ್ತಾವಿತ ರಸ್ತೆ ನಕ್ಷೆ ಬಗ್ಗೆಯೂ ಚರ್ಚಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT