ಚಿನ್ನದ ಕಳ್ಳಸಾಗಣೆ (ಸಾಂಕೇತಿಕ ಚಿತ್ರ) 
ರಾಜ್ಯ

ಕರ್ನಾಟಕದ ಕರಾವಳಿ ಭಾಗದ ಚಿನ್ನದ ಕಳ್ಳಸಾಗಾಣಿಕೆಗೆ ಭಟ್ಕಳದ ನಂಟು!

ಕರಾವಳಿ ಕರ್ನಾಟಕದಲ್ಲಿ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣಗಳು ಏರಿಕೆಯಾಗುತ್ತಿದೆ. 

ಕಾರವಾರ: ಕರಾವಳಿ ಕರ್ನಾಟಕದಲ್ಲಿ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣಗಳು ಏರಿಕೆಯಾಗುತ್ತಿದೆ. ಅಧಿಕಾರಿಗಳು ಆರೋಪಿಗಳನ್ನು ಬಂಧಿಸುತ್ತಿರುವುದರಿಂದ ಕರಾವಳಿ ಭಾಗದಲ್ಲಿನ ಚಿನ್ನದ ಕಳ್ಳಸಾಗಾಣಿಕೆ ಏರಿಕೆ ಸ್ಪಷ್ಟವಾಗಿ ಗೋಚರಿಸುತ್ತಿದೆ.
 
ಸೆ.20, 2020 ರಲ್ಲಿ 50 ಗ್ರಾಮ್ ಚಿನ್ನದೊಂದಿಗೆ ತೆರಳುತ್ತಿದ್ದ ಭಟ್ಕಳದ ವ್ಯಕ್ತಿಯೋರ್ವನನ್ನು ಕೋಯಿಕ್ಕೋಡ್ ವಿಮಾನ ನಿಲ್ದಾಣದಲ್ಲಿ  ಬಂಧಿಸಲಾಗಿತ್ತು.

ಜ.7, 2021 ರಲ್ಲಿ 22 ಲಕ್ಷ ಮೌಲ್ಯದ 741 ಗ್ರಾಮ್  ಚಿನ್ನಾಭರಣಗಳನ್ನು ಕಳ್ಳಸಾಗಣೆಮಾಡುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. 

ಇದಾದ ಬಳಿಕ ಮೇ.18, 2021 ರಲ್ಲಿ 262 ಗ್ರಾಮ್ ತೂಗುವ 13.17 ಲಕ್ಷ ಮೌಲ್ಯದ ಚಿನ್ನವನ್ನು ವ್ಯಕ್ತಿಯೋರ್ವನಿಂದ ವಶಪಡಿಸಿಕೊಳ್ಳಲಾಗಿತ್ತು. ಆಗಸ್ಟ್ 25 ರಂದು ಮತ್ತೋರ್ವ ವ್ಯಕ್ತಿಯಿಂದ 5.58 ಲಕ್ಷದಷ್ಟು ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು.

ಈ ಎಲ್ಲಾ ಪ್ರಕರಣಗಳಲ್ಲೂ ಒಂದು ಸಾಮ್ಯತೆಯೆಂದರೆ ಎಲ್ಲಾ ಆರೋಪಿಗಳೂ ಭಟ್ಕಳದ ಮೂಲದವರಾಗಿದ್ದಾರೆ. 

ಭಟ್ಕಳ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ನಂಟು, ಅಕ್ರಮ ವಲಸಿಗರಿಗೆ ನಕಾರಾತ್ಮಕ ಅಂಶಗಳಿಗೆ ಸುದ್ದಿಯಾಗುತ್ತಿದೆ. ಪ್ರತಿ ಬಾರಿಯೂ ಎಟಿಎಸ್ ಹಾಗೂ ಎನ್ಐಎ ಸಿಬ್ಬಂದಿಗಳು ಭೇಟಿ ನೀಡುವುದು ಸಾಮಾನ್ಯ ಸಂಗತಿಯಾಗಿದೆ.

ಈಗ ಈ ನಕಾರಾತ್ಮಕ ಅಂಶಗಳಿಗೆ ಚಿನ್ನದ ಕಳ್ಳಸಾಗಣೆ ಹೊಸದಾಗಿ ಸೇರ್ಪಡೆಯಾಗಿದೆ. ಮೂಲಗಳ ಪ್ರಕಾರ ಕೋವಿಡ್-19 ಸಂದರ್ಭದಲ್ಲಿ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿದ್ದವರನ್ನು ವಾಪಸ್ ಕರೆತರಲು ಭಾರತ ವಂದೇ ಭಾರತ್ ಮಿಷನ್ ನ್ನು ಕೈಗೊಂಡಾಗಲೂ ಚಿನ್ನದ ಕಳ್ಳಸಾಗಣೆ ವರದಿಯಾಗಿತ್ತು ಎಂದು ತಿಳಿದುಬಂದಿದೆ.

ಮಂಗಳೂರು, ಕಣ್ಣೂರು, ಭಟ್ಕಳ, ದುಬೈ ಗಳಲ್ಲಿ ಕಳ್ಳಸಾಗಣೆ ಮಾಡುವ ಜಾಲ ವ್ಯವಸ್ಥಿತವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ, ಚಪ್ಪಲಿಗಳಲ್ಲಿ, ಹೇರ್ ಬ್ಯಾಂಡ್, ಬಟ್ಟೆ ಒಣಗಿಸುವ ವೈರ್ ಗಳು ಎನ್-95 ಮಾಸ್ಕ್ ಗಳಲ್ಲಿ ಚಿನ್ನದ ಕಳ್ಳಸಾಗಣೆ ಮಾಡುವ ಮಾರ್ಗಗಳನ್ನು ಕಳ್ಳಸಾಗಣೆ ಮಾಡುವವರು ಕಂಡುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT