ಸಾಂಕೇತಿಕ ಚಿತ್ರ 
ರಾಜ್ಯ

ಬೆಂಗಳೂರಿನ ಕೋರಮಂಗಲದ ಘನ ತ್ಯಾಜ್ಯ ನಿರ್ವಹಣೆ ಮಾದರಿ ಯಲಹಂಕದಲ್ಲಿ ನಿರ್ಮಾಣ

ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಕಸ ವಿಲೇವಾರಿ ಸಮಸ್ಯೆ ಇರುವಾಗ, ಕೋರಮಂಗಲ ವಾರ್ಡ್ ಸಂಖ್ಯೆ 151 ಜನರು ಕಸ ವಿಲೇವಾರಿಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಕಸ ವಿಲೇವಾರಿ ಸಮಸ್ಯೆ ಇರುವಾಗ, ಕೋರಮಂಗಲ ವಾರ್ಡ್ ಸಂಖ್ಯೆ 151 ಜನರು ಕಸ ವಿಲೇವಾರಿಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ. ಇಲ್ಲಿನ ನಿವಾಸಿಗಳ ಮನೆಯಲ್ಲಿ ತಯಾರಾಗುವ ಕಸವನ್ನು ರೆಸ್ಟೋರೆಂಟ್‌ಗಳು ಇಂಧನದ ರೂಪದಲ್ಲಿ ಬಳಸುತ್ತವೆ. ಈಗ, ಅದೇ ಘನ ತ್ಯಾಜ್ಯ ನಿರ್ವಹಣೆ (SWM) ಮಾದರಿಯನ್ನು ಯಲಹಂಕದಲ್ಲಿ ಕೂಡ ನಿರ್ಮಿಸಲು ಸಜ್ಜಾಗಿದ್ದಾರೆ.

ಕೋರಮಂಗಲ ಹವಾಮಾನ ಕ್ರಿಯಾ ಯೋಜನೆ (ಕೆಸಿಎಲ್‌ಎಪಿ) ಯ ಸದಸ್ಯರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ (ಆರ್‌ಡಬ್ಲ್ಯೂಎ) ಮತ್ತು ತಜ್ಞರೊಂದಿಗೆ, ಯಲಹಂಕ ವಲಯದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾದರಿಯನ್ನು ನಿರ್ಮಿಸಲು ಮುಂದಾಗಿದ್ದಾರೆ. ಯಲಹಂಕದ ಅಧಿಕಾರಿಗಳು ಮತ್ತು ಆರ್‌ಡಬ್ಲ್ಯೂಎಗಳು ಆಮ್ಲಜನಕರಹಿತ ಜೈವಿಕ ಅನಿಲ ಸ್ಥಾವರವನ್ನು ಪರಿಶೀಲಿಸಿದ್ದಾರೆ. ಅಲ್ಲಿ ಐದರಿಂದ ಆರು ಟನ್‌ಗಳಷ್ಟು ವಿಂಗಡಿಸಲಾದ ತ್ಯಾಜ್ಯವನ್ನು ಅನಿಲವಾಗಿ ಪರಿವರ್ತಿಸಲಾಗುತ್ತದೆ.

ಕೆಸಿಎಲ್‌ಎಪಿ ಸ್ಥಾಪಕರಾದ ಪದ್ಮಶ್ರೀ ಬಲರಾಮ್ ಅವರು ಎರಡು ಎಕರೆ ಭೂಮಿಯಲ್ಲಿ ನಿರ್ಮಿಸಿದ್ದು, ವಾರಕ್ಕೆ 40 ಟನ್ ತ್ಯಾಜ್ಯವನ್ನು ಘಟಕದಲ್ಲಿ ಉತ್ಪಾದಿಸುತ್ತಾರೆ. "ಐದು ಟನ್‌ಗಳಿಗಿಂತ ಕಡಿಮೆ ಸಾಮರ್ಥ್ಯವಿರುವ ಘಟಕವನ್ನು ಸ್ಥಾಪಿಸುವುದು ಕಷ್ಟವೇನಲ್ಲ. ಇದಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್‌ಪಿಸಿಬಿ) ಅನುಮತಿಯ ಅಗತ್ಯವಿಲ್ಲ, ಆದರೆ ಅದನ್ನು ಉಳಿಸಿಕೊಳ್ಳುವುದು ಮತ್ತು ಪ್ರತ್ಯೇಕವಾದ ತ್ಯಾಜ್ಯದ ನಿರಂತರ ಪೂರೈಕೆ ಮಾಡುವುದು ಮುಖ್ಯ ಎನ್ನುತ್ತಾರೆ.

ಈಗ ಬಯೋ-ಸಿಎನ್‌ಜಿಯಿಂದ ತ್ಯಾಜ್ಯ ಸಂಸ್ಕರಣಾ ಘಟಕಗಳಿಂದ ಉತ್ಪತ್ತಿಯಾಗುವ ಜೈವಿಕ ಅನಿಲಕ್ಕೆ ಆಟೋ ಟಿಪ್ಪರ್‌ಗಳಲ್ಲಿ ಇಂಧನವನ್ನು ಬದಲಿಸುವ ಕೆಲಸ ಮಾಡುತ್ತಿದ್ದಾರೆ. ಎಸ್‌ಡಬ್ಲ್ಯೂಎಂ ಮಾದರಿಯಲ್ಲಿ ಹೆಚ್ಚಿನ ರೆಸ್ಟೋರೆಂಟ್‌ಗಳು, ಅಪಾರ್ಟ್ ಮೆಂಟ್ ಸಂಕೀರ್ಣಗಳು, ವಸತಿ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಸೇವೆಗಳನ್ನು ಸೇರಿಸುವ ಯೋಜನೆ ಇದೆ ಎಂದರು.

ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತ ಅಶೋಕ್ ಡಿ ಆರ್, ಈಗ ಯಲಹಂಕದಲ್ಲಿ ಅದೇ ಕಾರ್ಯ ಮಾದರಿಯನ್ನು ಪುನರಾವರ್ತಿಸಲು ಬಜೆಟ್ ಪಡೆಯುವುದರೊಂದಿಗೆ ಅಂತಿಮ ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT