ಸಾಂದರ್ಭಿಕ ಚಿತ್ರ 
ರಾಜ್ಯ

ಹೆಚ್ಚು ವಿದ್ಯುತ್ ಉತ್ಪಾದಿಸಲು ಸಚಿವರ ಪ್ಲಾನ್: ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಮೇಲೆ ಸೌರ ವಿದ್ಯುತ್‌ ಉತ್ಪಾದನಾ ಘಟಕ

ರಾಜ್ಯದ ಎಲ್ಲ ಸರಕಾರಿ ಕಟ್ಟಡಗಳ ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಿ, ವಿದ್ಯುತ್‌ ಉತ್ಪಾದಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದರು.

ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ಕಟ್ಟಡಗಳ ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಿ, ವಿದ್ಯುತ್‌ ಉತ್ಪಾದಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಎಂ.ನಾರಾಯಣಸ್ವಾಮಿ ಪ್ರಶ್ನೆಗೆ ಉತ್ತರಿಸಿ, ''ರಾಜ್ಯದಲ್ಲಿ 2020-21ನೇ ಸಾಲಿನಲ್ಲಿ ಸೌರಶಕ್ತಿ ಛಾವಣಿಯಿಂದ 233.49 ದಶಲಕ್ಷ ಯೂನಿಟ್‌ ವಿದ್ಯುತ್‌ ಉತ್ಪಾದನೆಯಾಗಿದೆ. ಪ್ರಸಕ್ತ ವರ್ಷದಲ್ಲಿ ಜುಲೈ ಅಂತ್ಯದವರೆಗೆ 48.85 ದಶಲಕ್ಷ ಯೂನಿಟ್‌ ಉತ್ಪಾದನೆಯಾಗಿದೆ. ಈ ವರ್ಷ ಒಟ್ಟು 372 ದಶಲಕ್ಷ ಯೂನಿಟ್‌ ಉತ್ಪಾದಿಸುವ ಗುರಿ ಹೊಂದಲಾಗಿದೆ'' ಎಂದು ಹೇಳಿದರು.

'ಗ್ರಾಮ ಪಂಚಾಯಿತಿಗಳು ತಮ್ಮ ಕಟ್ಟಡಗಳ ಮೇಲೆ ಉತ್ಪಾದನೆಗೆ ಅನುಮತಿ ನೀಡದಿರಲು ತೀರ್ಮಾನಿಸಿವೆ. ಹೊರರಾಜ್ಯಗಳಿಂದ ವಿದ್ಯುತ್‌ ಖರೀದಿಸುವ ಹುನ್ನಾರದಿಂದ ಸೌರ ವಿದ್ಯುತ್‌ ಉತ್ಪಾದನೆ ಕಡಿಮೆ ಮಾಡಲಾಗುತ್ತಿದೆ,'' ಎಂದು ನಾರಾಯಣಸ್ವಾಮಿ ಆರೋಪಿಸಿದರು. ಸಚಿವ ವಿ.ಸುನಿಲ್‌ ಕುಮಾರ್‌, ''ಹೊರ ರಾಜ್ಯಗಳಿಂದ ವಿದ್ಯುತ್‌ ಖರೀದಿಸುವ ಯಾವುದೇ ಪ್ರಸ್ತಾವ ಇಲ್ಲ. ಸರಕಾರಿ ಕಟ್ಟಡಗಳ ಮೇಲ್ಛಾವಣಿಯಲ್ಲಿ ಸೌರಶಕ್ತಿ ಫಲಕಗಳನ್ನು ಅಳವಡಿಸಿ, ವಿದ್ಯುತ್‌ ಉತ್ಪಾದಿಸುವುದು ನೂತನ ಯೋಜನೆ. ಈಗಾಗಲೇ ವಿಕಾಸಸೌಧ ಛಾವಣಿಯಲ್ಲಿ 100 ಕಿ.ವ್ಯಾ ಸೌರ ಘಟಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

'ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳಿಂದ 15,193 ಮೆ.ವ್ಯಾ ವಿದ್ಯುತ್‌ ಉತ್ಪಾದನೆಯಾಗುತ್ತಿದ್ದು, ದೇಶದಲ್ಲೇ ನಂ. 1 ಸ್ಥಾನದಲ್ಲಿದೆ. ಕೆಇಆರ್‌ಸಿ ನಿಗದಿಪಡಿಸಿರುವ ಇಂಧನ ಖರೀದಿ ಗುರಿ ಸಾಧಿಸಿರುವುದರಿಂದ ಹೈಬ್ರಿಡ್‌ ಪ್ರಾಜೆಕ್ಟ್ಸ್‌ನಿಂದ ವಿದ್ಯುತ್‌ ಖರೀದಿಸುವ ಪ್ರಸ್ತಾವನೆ ಇಲ್ಲ,'' ಎಂದು ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT