ಕೋವಿಡ್-19 ಆಸ್ಪತ್ರೆ (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯದಲ್ಲಿ ಕೊರೋನಾ ದಿಢೀರ್ ಏರಿಕೆ: ಇಂದು 1116 ಪ್ರಕರಣ ಪತ್ತೆ; 8 ಸಾವು; 7 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

ರಾಜ್ಯದಲ್ಲಿ ಇಳಿಮುಖದತ್ತ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಇಳಿಮುಖದತ್ತ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 8 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,537ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ದಿನದ ಪ್ರಮುಖ ಸುದ್ದಿಗಳ ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಇಂದು 462 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,42,332ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 970 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,10,626ಕ್ಕೆ ಏರಿಕೆಯಾಗಿದೆ. ಇನ್ನು15,892 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,70,306ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1116 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.65ಕ್ಕೆ ಇಳಿದಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT