ಇಂಜಿನಿಯರ್ ಗಳ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ.ಆರ್.ವೃತ್ತದಲ್ಲಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು. 
ರಾಜ್ಯ

ಸರ್ ಎಂ.ವಿಶ್ವೇಶ್ವರಯ್ಯನವರ ಹಾದಿಯಲ್ಲಿಯೇ ನಾಡು ಕಟ್ಟಲು ಸಂಕಲ್ಪ ಮಾಡೋಣ: ಸಿಎಂ ಬಸವರಾಜ ಬೊಮ್ಮಾಯಿ

ಎಂಜಿನಿಯರ್ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬೆಂಗಳೂರು: ಎಂಜಿನಿಯರ್ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸರ್ ಎಂ ವಿಶ್ವೇಶ್ವರಯ್ಯನವರ 161ನೇ ಜಯಂತಿ. ವಿಶ್ವೇಶ್ವರಯ್ಯ ಜೀವನ ಮೌಲ್ಯ, ಅವರ ಬುದ್ಧಿವಂತಿಕೆ, ಶ್ರಮಿಕ ಮನೋಭಾವವನ್ನು ನಾವು ಅದರಲ್ಲೂ ಯುವಜನತೆ ಅನುಸರಿಸಬೇಕಾಗಿದೆ. ರೈತರು, ಕಾರ್ಮಿಕ ವರ್ಗ ಹೊಲದಲ್ಲಿ ಕೆಲಸ ಮಾಡುವ ಶ್ರಮಜೀವಿಗಳು ದೇಶದ ಆರ್ಥಿಕತೆಯನ್ನು ಹೆಚ್ಚಿಸುವವರು, ಅವರ ಪ್ರತಿನಿಧಿಯಾಗಿ ಸರ್ ಎಂ ವಿಶ್ವೇಶ್ವರಯ್ಯನವರು ನಿಲ್ಲುತ್ತಾರೆ ಎಂದರು.

ವಿಶ್ವೇಶ್ವರಯ್ಯನವರು ಈ ನಾಡಿನ ಭವ್ಯ ಏಳಿಗೆಗೆ ಕನಸು ಕಂಡಂತವರು, ಅವರಡಿಯಲ್ಲಿ ಹಲವಾರು ಕಾರ್ಯಕ್ರಮಗಳು ಆಗಿವೆ, ಅವರ ಸಾಧನೆ ಹಲವಾರು. ಕೆಆರ್ ಎಸ್ ಡ್ಯಾಂನಿಂದ ಹಿಡಿದು ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳು, ಕಾರ್ಖಾನೆಗಳು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಮಹಿಳಾ ಮೀಸಲಾತಿ ಕುರಿತು ಪ್ರಗತಿಪರ ಚಿಂತನೆಯನ್ನು ನಡೆಸಿದ್ದ ಸರ್ ಎಂ ವಿಶ್ವೇಶ್ವರಯ್ಯನವರಿಗೆ ನಮನಗಳನ್ನು ಸಲ್ಲಿಸುವ ದಿನವಿಂದು ಎಂದು ಹೇಳಿದರು.

ಅವರ ಸಂಕಲ್ಪದಂತೆ ನಡೆದು ನಾಡು ಕಟ್ಟುವ ಸಂಕಲ್ಪ ಮಾಡುವ ದಿನವಿಂದು. ಇಲ್ಲಿ ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಕಾರಂಜಿ ಕೂಡ ಆರಂಭಿಸಿದ್ದೇವೆ. ಇದೇ ರೀತಿ ಬೆಂಗಳೂರಿನ 30 ಕಡೆಗಳಲ್ಲಿ ನಿರ್ಮಿಸಲಾಗುತ್ತಿದ್ದು ಬೆಂಗಳೂರಿನ ಅಂದವನ್ನು ಹೆಚ್ಚಿಸಲಿದೆ. ಬಿಬಿಎಂಪಿ ಈ ಕೆಲಸವನ್ನು ಮಾಡುತ್ತಿದೆ. ಸರ್ ಎಂ ವಿಶ್ವೇಶ್ವರಯ್ಯನವರು ವಿದ್ಯುತ್ ಉತ್ಪಾದನೆ, ನೀರಾವರಿ, ಶಿಕ್ಷಣಕ್ಕೆ ನೀಡಿದ ಕಾಣಿಕೆಯ ಹಿನ್ನೆಲೆಯಲ್ಲಿ ಈ ನಾಡನ್ನು ಕಟ್ಟುವ ಕೆಲಸಕ್ಕೆ ನಾವೆಲ್ಲರೂ ಶ್ರಮಪಡೋಣ ಎಂದರು.

ಸಿಎಂ ಅವರ ಜೊತೆ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಬೆಸ್ಕಾಂ ನೌಕರ ಚಂದನ್ ಎಂಬುವವರು ಕೂಡ ಕೈಜೋಡಿಸಿದ್ದು ವಿಶೇಷವಾಗಿತ್ತು. 

ಕಳಪೆ ಕಾಮಗಾರಿ ವಿರುದ್ಧ ಕ್ರಮ: ಬೆಂಗಳೂರು ನಗರದ ರಸ್ತೆ ಕಾಮಗಾರಿ ಬಗ್ಗೆ ಬಿಬಿಎಂಪಿ ಆಯುಕ್ತರ ಬಳಿ ವರದಿ ತರಿಸಲಿದ್ದು ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದರೆ, ಕಳಪೆಯಾಗಿದ್ದರೆ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT