ಕೋವಿಡ್ ಲಸಿಕೆ 
ರಾಜ್ಯ

ಹಾಸನ: ಶೇ.100 ರಷ್ಟು ಲಸಿಕೆ ಗುರಿ ತಲುಪಲು ಮನೆ ಬಾಗಿಲಿಗೆ ಲಸಿಕೆ ಅಭಿಯಾನ

ಹಾಸನ ಜಿಲ್ಲಾಡಳಿತ ಶೇ.100 ರಷ್ಟು ಲಸಿಕೆ ಗುರಿ ಹೊಂದಿದ್ದು ಈ ನಿಟ್ಟಿನಲ್ಲಿ ಮನೆ ಬಾಗಿಲಿಗೆ ಲಸಿಕೆ ಅಭಿಯಾನ ಪ್ರಾರಂಭಿಸಿದೆ.

ಹಾಸನ: ಹಾಸನ ಜಿಲ್ಲಾಡಳಿತ ಶೇ.100 ರಷ್ಟು ಲಸಿಕೆ ಗುರಿ ಹೊಂದಿದ್ದು ಈ ನಿಟ್ಟಿನಲ್ಲಿ ಮನೆ ಬಾಗಿಲಿಗೆ ಲಸಿಕೆ ಅಭಿಯಾನ ಪ್ರಾರಂಭಿಸಿದೆ.

ಇದಕ್ಕಾಗಿ ಜಿಲ್ಲಾಧಿಕಾರಿ ಆರ್ ಗಿರೀಶ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಿರಿಯ ನರ್ಸ್, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಹಾಯಕರನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಲಾಗಿದೆ.

ವಿಶೇಷ ತಂಡಗಳು ಮೊದಲ ಹಂತದಲ್ಲಿ ಪ್ರತಿ ತಾಲೂಕಿನಲ್ಲೂ 100 ಗ್ರಾಮಗಳಿಗೆ ಭೇಟಿ ನೀಡಲಿದೆ. ಅಧಿಕಾರಿಗಳ ಡೇಟಾ ಪ್ರಕಾರ 1,335 ಮಂದಿ ಜಿಲ್ಲೆಯಲ್ಲಿ ಕೋವಿಡ್-19 ಕಾರಣದಿಂದ ಮೃತಪಟ್ಟಿದ್ದಾರೆ.

1.1 ಲಕ್ಷ ಮಂದಿ ಜಿಲ್ಲೆಯಲ್ಲಿ ಕೋವಿಡ್-19 ನಿಂದ ಚೇತರಿಸಿಕೊಂಡಿದ್ದು 562 ಪಾಸಿಟೀವ್ ಪ್ರಕರಣಗಳಿವೆ. ಕಳೆದ 15 ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಆರೋಗ್ಯ ಇಲಾಖೆ ಹೆಚ್ಚು ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿದ್ದು ಜನತೆ ಲಸಿಕೆ ಕೇಂದ್ರಗಳಿಗೆ ತೆರಳುತ್ತಿದ್ದಂತೆಯೇ ಲಸಿಕೆ ಪಡೆದುಕೊಳ್ಳಬಹುದಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಅವರ ಮಾಹಿತಿಯ ಪ್ರಕಾರ, ಮನೆ ಬಾಗಿಲಿಗೆ ಲಸಿಕೆ ಅಭಿಯಾನವನ್ನು ಹಾಸನ ನಗರದ ಪ್ರದೇಶಗಳ ಬಳಿ ಇರುವ ಗ್ರಾಮಗಳಲ್ಲಿ ಪ್ರಾರಂಭಿಸಲಾಗಿದೆ. ಮುಂದಿನ 10 ದಿನಗಳಲ್ಲಿ 1 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಜಿಲ್ಲಾಧಿಕಾರಿ ಆರ್ ಗಿರೀಶ್  ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲನೆ ಮಾಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ ಜಿಲ್ಲೆ ವಿಭಜನೆ: ಸಿಎಂ ಸಿದ್ದರಾಮಯ್ಯ ಭೇಟಿ ಮನವಿ ಸಲ್ಲಿಸಿದ ನಿಯೋಗ

ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು: 20 ಸಾವಿರ ರೈತರೊಂದಿಗೆ ಸುವರ್ಣ ಸೌಧಕ್ಕೆ ಇಂದು ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

ST ವರ್ಗ ಸೇರ್ಪಡೆಗೆ ಆಗ್ರಹ: ಡಿ.15ರಂದು ಬೆಳಗಾವಿಯಲ್ಲಿ ಕುರುಬ ಸಮುದಾಯ ಬೃಹತ್ ಪ್ರತಿಭಟನೆ

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ನೀಡುವುದು ಕೇಂದ್ರದ ಜವಾಬ್ದಾರಿಯೂ ಹೌದು: ರಾಜ್ಯ ಸರ್ಕಾರ

ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಇತಿಹಾಸವಿಲ್ಲ, ನಿಸ್ಪಕ್ಷಪಾತವಾಗಿ ಕೆಲಸ ಮಾಡಿದ್ದೇನೆ: ಬಸವರಾಜ ಹೊರಟ್ಟಿ

SCROLL FOR NEXT