ಬಸವರಾಜ ಬೊಮ್ಮಾಯಿ 
ರಾಜ್ಯ

ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ

ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಸಿಕ್ಕಿದೆ.

ಬೆಂಗಳೂರು: ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯ್ತಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಸಿಕ್ಕಿದೆ.

ವಿಧೇಯಕ ಮಂಡನೆ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ವಿಧೇಯಕ ಮೂಲಕ ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಪುನರ್ವಿಂಗಡನೆ ಮಾಡಲಾಗುತ್ತದೆ. 

ಈ ತಿದ್ದುಪಡಿ ಮಸೂದೆ ಜಾರಿಗೆ ಬಂದ ತಕ್ಷಣ ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಎಲ್ಲಾ ಕ್ಷೇತ್ರ ಪುನರ್ವಿಂಗಡನೆ ಅಧಿಸೂಚನೆ ರದ್ದಾಗಲಿದೆ. ಕ್ಷೇತ್ರ ಪುನರ್ವಿಂಗಡನೆ ಆಧಾರದಲ್ಲಿ ಜಾರಿಯಲ್ಲಿರುವ ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಮೀಸಲಿರಿಸುವ ಎಲ್ಲಾ ಅಧಿಸೂಚನೆಗಳು ರದ್ದಾಗಲಿದೆ. 

ಇನ್ನು ಇಂದು ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರವಾಗುತ್ತಿದ್ದಂತೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ನಾಳೆ ಬೆಳಗ್ಗೆ 10.30ಕ್ಕೆ ಕಲಾಪ ಆರಂಭವಾಗಲಿದೆ. 

ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ವಿರೋಧ:
ವಿಧಾನಸಭೆಯಲ್ಲಿಂದು ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯಿತಿ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ತಿದ್ದುಪಡಿ ಮಸೂದೆಗೆ ಸಂಬಂಧಿಸಿ ಸೋಮವಾರ ನ್ಯಾಯಾಲಯದ ಮುಂದೆ ಹೋಗಬೇಕಿರುವುದರಿಂದ ಇಂದೇ ಮಸೂದೆ ಅಂಗೀಕಾರಕ್ಕೆ ಆಡಳಿತ ಸದಸ್ಯರು ಅವಸರ ತೋರಿದರಾದರೂ, ವಿಪಕ್ಷ ಸದಸ್ಯರು ಚರ್ಚೆಗೆ ಪಟ್ಟು ಹಿಡಿದರು. ಹಾಗೂ ಸದುದ್ದೇಶವಲ್ಲದ ಮಸೂದೆಗೆ ತಿದ್ದುಪಡಿ ತರುವ ತೀರ್ಮಾನ ಹಿಂಪಡೆಯಲು ಒತ್ತಾಯಿಸಿದರು.

ಮಸೂದೆ ತಿದ್ದುಪಡಿಯಿಂದಾಗಿ ಅಧಿಕಾರ ವಿಕೇಂದ್ರೀಕರಣದ ಉದ್ದೇಶಕ್ಕೆ ಧಕ್ಕೆಯಾಗಲಿದೆ, ಸಂವಿಧಾನದ ಆಶಯಕ್ಕೆ ವಿರೋಧ ಎಂದು ಪ್ರತಿಪಕ್ಷ ನಾಯಕರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಜೆಡಿಎಸ್ ಶಾಸಕ ರೇವಣ್ಣ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕೇವಲ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮುಂದೂಡುವ ದುರುದ್ದೇಶದಿಂದಲೇ ಈ ಮಸೂದೆಗೆ ತಿದ್ದುಪಡಿ ತರಲಾಗುತ್ತಿದೆ ಎಂಬ ಕೂಗು ಕೇಳಿಬಂದಿತು.

ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮೀಸಲಾತಿ ಬಗ್ಗೆ ಯಾರೂ ಹೃದಯಪೂರ್ವಕವಾಗಿ ಕೆಲಸ ಮಾಡುತ್ತಿಲ್ಲ. ಮೀಸಲಾತಿ ಎಂಬ ಅಸ್ತ್ರವನ್ನು ರಾಜಕೀಯ ವಿರೋಧಿಗಳನ್ನು ಮುಗಿಸಲು ಅಥವಾ ನಮಗೆ ಜೀ ಹುಜೂರ್ ಎನ್ನುವವರಿಗೆ ಮೀಸಲಾತಿ ಕೊಡುವುದು ಮುಂದುವರಿದಿದೆ ಎಂದು ಖೇದ ವ್ಯಕ್ತಪಡಿಸಿದರು.

ಮೀಸಲಾತಿಯ ಮೂಲ ಉದ್ದೇಶವು ಹಿಂದುಳಿದವರನ್ನು ಮುಂದೆ ತರುವುದು. ಆದರೆ ಈ ಉದ್ದೇಶ ಈಡೇರುತ್ತಿಲ್ಲ.

ಸ್ವಾರ್ಥಕ್ಕಾಗಿ, ಅಧಿಕಾರಕ್ಕಾಗಿ ನಡೆಯಬಾರದ್ದು ನಡೆಯುತ್ತಿದೆ. ಅಧಿಕಾರ ವಿಕೇಂದ್ರೀಕರಣಕ್ಕೆ ಮನಸ್ಸು ಮಾಡುತ್ತಿಲ್ಲ. ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯಿತಿ ತಿದ್ದುಪಡಿ ಮಸೂದೆಯ ಹಿಂದೆಯೂ ಇದೇ ಬಗೆಯ ಉದ್ದೇಶವಿದೆ ಎಂದು ಖಂಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT