ಹಲ್ಲೆಗೊಳಗಾದ ಕೌಸರ್ ನ್ಯೂಸ್ ಪ್ರಧಾನ ಸಂಪಾದಕ ಮೊಹಮ್ಮದ್ ಸಪ್ಧಾರ್ ಖೈಸರ್ 
ರಾಜ್ಯ

ಮೈಸೂರು: ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಉರ್ದು ಪತ್ರಿಕೆ ಪತ್ರಕರ್ತನ ಮೇಲೆ ಹಲ್ಲೆ

ನಗರದಲ್ಲಿ ಗುರುವಾರ ದೇವಸ್ಥಾನ ತೆರವು ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉರ್ದು ಡೈಲಿ ಮತ್ತು ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.

ಮೈಸೂರು: ನಗರದಲ್ಲಿ ಗುರುವಾರ ದೇವಸ್ಥಾನ ತೆರವು ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉರ್ದು ಡೈಲಿ ಮತ್ತು ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.

ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಹೇಳಿಕೆಯನ್ನು ರೆಕಾರ್ಡಿಂಗ್ ಮಾಡುವಾಗ ಕೌಸರ್ ನ್ಯೂಸ್ ಪ್ರಧಾನ ಸಂಪಾದಕ ಮೊಹಮ್ಮದ್ ಸಪ್ಧಾರ್ ಖೈಸರ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರತಿಭಟನೆಯನ್ನು ರೆಕಾರ್ಡ್ ಮಾಡಿಕೊಳ್ಳುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವೇದಿಕೆ ಕಾರ್ಯಕರ್ತರು, ವಿಡಿಯೋವನ್ನು ಡಿಲೀಟ್ ಮಾಡುವಂತೆ ಒತ್ತಾಯಿಸಿ ಮೊಹಮ್ಮದ್ ಮೇಲೆ ಹಲ್ಲೆ ನಡೆಸಿದ್ದಾರೆ.

ತಾನೊಬ್ಬ ಪತ್ರಕರ್ತ ಎಂದು ಹೇಳಿದ್ದರೂ ಪೊಲೀಸರ ಸಮ್ಮುಖದಲ್ಲಿಯೇ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ತಕ್ಷಣ ಪೊಲೀಸರು ಕೋಟೆ ಆಂಜನೇಯ ಸ್ವಾಮಿ ದೇವಾಲಯ ಬಳಿಕ ರೂಮ್ ಒಂದಕ್ಕೆ ಕರೆದೊಯ್ದು ಪತ್ರಕರ್ತನನ್ನು ರಕ್ಷಿಸಿದ್ದಾರೆ. 

ಪ್ರತಿಭಟನಾ ಸ್ಥಳದ ಒಳಗಿದ್ದ ಅಪರಿಚಿತರಿಂದ ಈ ಘಟನೆ ನಡೆದಿದೆ ಎಂದು ಅನೇಕ ಪ್ರತಿಭಟನಾಕಾರರು ಹೇಳಿದ್ದಾರೆ. ಪತ್ರಕರ್ತ ಎಂದು ತಿಳಿದ ಮೇಲೂ ಪ್ರತಿಭಟನಾಕಾರರು ಹಲ್ಲೆಯನ್ನು ಮುಂದುವರೆಸಿದ್ದಾಗಿ ಅನೇಕ ಮಾಧ್ಯಮ ಪ್ರತಿನಿಧಿಗಳು ಹೇಳಿದ್ದಾರೆ. 

ಈ ಘಟನೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರನ್ನು ಆಗ್ರಹಿಸಿದೆ. ಧಾರ್ಮಿಕ ಕಾರ್ಯಕ್ರಮಗಳ ಸುದ್ದಿ ಮಾಡುವಾಗ ಪತ್ರಕರ್ತರಿಗೆ ರಕ್ಷಣೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT