ಹಲ್ಲೆಗೊಳಗಾದ ಕೌಸರ್ ನ್ಯೂಸ್ ಪ್ರಧಾನ ಸಂಪಾದಕ ಮೊಹಮ್ಮದ್ ಸಪ್ಧಾರ್ ಖೈಸರ್ 
ರಾಜ್ಯ

ಮೈಸೂರು: ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಉರ್ದು ಪತ್ರಿಕೆ ಪತ್ರಕರ್ತನ ಮೇಲೆ ಹಲ್ಲೆ

ನಗರದಲ್ಲಿ ಗುರುವಾರ ದೇವಸ್ಥಾನ ತೆರವು ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉರ್ದು ಡೈಲಿ ಮತ್ತು ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.

ಮೈಸೂರು: ನಗರದಲ್ಲಿ ಗುರುವಾರ ದೇವಸ್ಥಾನ ತೆರವು ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉರ್ದು ಡೈಲಿ ಮತ್ತು ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.

ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಹೇಳಿಕೆಯನ್ನು ರೆಕಾರ್ಡಿಂಗ್ ಮಾಡುವಾಗ ಕೌಸರ್ ನ್ಯೂಸ್ ಪ್ರಧಾನ ಸಂಪಾದಕ ಮೊಹಮ್ಮದ್ ಸಪ್ಧಾರ್ ಖೈಸರ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರತಿಭಟನೆಯನ್ನು ರೆಕಾರ್ಡ್ ಮಾಡಿಕೊಳ್ಳುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವೇದಿಕೆ ಕಾರ್ಯಕರ್ತರು, ವಿಡಿಯೋವನ್ನು ಡಿಲೀಟ್ ಮಾಡುವಂತೆ ಒತ್ತಾಯಿಸಿ ಮೊಹಮ್ಮದ್ ಮೇಲೆ ಹಲ್ಲೆ ನಡೆಸಿದ್ದಾರೆ.

ತಾನೊಬ್ಬ ಪತ್ರಕರ್ತ ಎಂದು ಹೇಳಿದ್ದರೂ ಪೊಲೀಸರ ಸಮ್ಮುಖದಲ್ಲಿಯೇ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ತಕ್ಷಣ ಪೊಲೀಸರು ಕೋಟೆ ಆಂಜನೇಯ ಸ್ವಾಮಿ ದೇವಾಲಯ ಬಳಿಕ ರೂಮ್ ಒಂದಕ್ಕೆ ಕರೆದೊಯ್ದು ಪತ್ರಕರ್ತನನ್ನು ರಕ್ಷಿಸಿದ್ದಾರೆ. 

ಪ್ರತಿಭಟನಾ ಸ್ಥಳದ ಒಳಗಿದ್ದ ಅಪರಿಚಿತರಿಂದ ಈ ಘಟನೆ ನಡೆದಿದೆ ಎಂದು ಅನೇಕ ಪ್ರತಿಭಟನಾಕಾರರು ಹೇಳಿದ್ದಾರೆ. ಪತ್ರಕರ್ತ ಎಂದು ತಿಳಿದ ಮೇಲೂ ಪ್ರತಿಭಟನಾಕಾರರು ಹಲ್ಲೆಯನ್ನು ಮುಂದುವರೆಸಿದ್ದಾಗಿ ಅನೇಕ ಮಾಧ್ಯಮ ಪ್ರತಿನಿಧಿಗಳು ಹೇಳಿದ್ದಾರೆ. 

ಈ ಘಟನೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರನ್ನು ಆಗ್ರಹಿಸಿದೆ. ಧಾರ್ಮಿಕ ಕಾರ್ಯಕ್ರಮಗಳ ಸುದ್ದಿ ಮಾಡುವಾಗ ಪತ್ರಕರ್ತರಿಗೆ ರಕ್ಷಣೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT