ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕೆಲಸಗಾರ 
ರಾಜ್ಯ

30*40, ಅದಕ್ಕಿಂತಲೂ ದೊಡ್ಡ ಸೈಟಲ್ಲಿ ಮಳೆ ನೀರು ಕೊಯ್ಲು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ!

ಮಳೆ ನೀರು ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಪ್ರಸ್ತುತ ಇರುವ ಕಾನೂನನ್ನು ರಾಜ್ಯ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದ್ದು, ಈ ಕುರಿತ ವಿಧೇಯಕವೊಂದು ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.

ಬೆಂಗಳೂರು: ಮಳೆ ನೀರು ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಪ್ರಸ್ತುತ ಇರುವ ಕಾನೂನನ್ನು ರಾಜ್ಯ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದ್ದು, ಈ ಕುರಿತ ವಿಧೇಯಕವೊಂದು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. 

ಈ ಸಂಬಂಧ ಸದನದಲ್ಲಿ ನಿನ್ನೆ ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ ವಿದೇಶವನ್ನು ಅಂಗೀಸಲಾಗಿತ್ತು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಅಂಗೀಕರಿಸುವಂತೆ ಕೋರಿ ಸದನದ ಒಪ್ಪಿಗೆ ಪಡೆದುಕೊಂಡರು.

ಈಗಾಗಲೇ ನಗರದಲ್ಲಿ ಮಳೆ ನೀರು ಕೊಯ್ಡು ಕಡ್ಡಾಯವಾಗಿದೆ. ಆದರೂ ಬಹಳಷ್ಟು ಮಂದಿ ನಿರ್ಮಿಸಿಕೊಂಡಿಲ್ಲ. ಇದು ಭವಿಷ್ಯದಲ್ಲಿ ನೀರಿನ ಅಭಾವ ಎದುರಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನಲ್ಲಿ 30*40 ಮತ್ತು ಅದಕ್ಕಿಂತ ಮೇಲ್ಪಟ್ಟ ನಿವೇಶನದಲ್ಲಿ ನಿರ್ಮಿಸಲ್ಪಟ್ಟ ಕಟ್ಟಡದಲ್ಲಿ ಮಳೆ ನೀರು ಕೊಯ್ದು ಕಡ್ಡಾಯವಾಗಿರಬೇಕು, 40*60 ಹಾಗೂ ಅದಕ್ಕಿಂತ ಮೇಲ್ಪಟ್ಟ ನಿವೇಶನದಲ್ಲಿ ನಿರ್ಮಿಸುವ ಕಟ್ಟಡದಲ್ಲಿ ಎರಡು ಪೈಪ್ ಗಳನ್ನು ಕಡ್ಡಾಯಗೊಳಿಸಿದೆ. ಅಲ್ಲದೆ, 40*60 ಮತ್ತು ಅದಕ್ಕಿಂತ ಮೇಲ್ಪಟ್ಟ ನಿವೇಶನದಲ್ಲಿ ನಿರ್ಮಿಸಿುವ ಕಟ್ಟಡದಲ್ಲಿ ಎರಡು ಪೈಪ್ ಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ತಿಳಿಸಿದೆ. 

ಒಂದು ಪೈಪ್ ಸಂಗ್ರಹಣೆ ಮತ್ತು ಮತ್ತೊಂದು ಪೈಪ್ ಬಳಕೆಯ ದೃಷ್ಟಿಯಿಂದಾಗಿದೆ. ಸಂಗ್ರ ಮಾಡುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರವಾಲಿದೆ. 

ಇನ್ನು ಕಾವೇರಿ ನೀರು ಅಥವಾ ಅಂತರ್ಜಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು, ಮಳೆ ನೀರು ಒಳಚರಂಡಿಯಲ್ಲಿ ಹರಿದು ಹೋಗುವುದನ್ನು ತಗ್ಗಿಸುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ವಿಧೇಯಕವನ್ನು ಅಂಗೀಕರಿಸಲಾಗಿದೆ. ಅಲ್ಲದೆ ನಗರ ಪ್ರವಾಹವನ್ನು ಇಳಿಸುವುದು ಮೇಲ್ಮೈ ಮತ್ತು ಅಂತರ್ಜಲದ ಅಂಚು ರಹಿತ ಮಾಲಿನ್ಯ ಮೂಲವನ್ನು ಕಡಿಮೆಗೊಳಿಸುವುದು. ಅಂತರ್ಜಲದ ಗುಣಮಟ್ಟದ ಕಳಪೆಯಾಗಿದ್ದರೆ ಮಳೆ ನೀರು ಕೊಯ್ಲಿನ ಮೂಲಕ ಹೊಸದಾದ ನೀರಿನ ಮೂಲವನ್ನು ಕಲ್ಪಿಸುವುದು ಮತ್ತು ಮಳೆ ನೀರು ಕೊಯ್ಲಿನ ನೀರು ಉಚಿತವಾಗಿದ್ದು, ತಕ್ಷಣವೇ ಲಭ್ಯವಾಗಲಿದೆ. ಸರಬರಾಜಿನ ವೆಚ್ಚವಿಲ್ಲದಿರುವುದರಿಂದ ಮಳೆನೀರು ಕೊಯ್ಲನ್ನು ಕಡ್ಡಾಯಗೊಳಿಸೋ ಉದ್ದೇಶವನ್ನು ಈ ವಿಧೇಯಕ ಹೊಂದಿದೆ. 

216 ಚದರ ಮೀಟರ್ ಗಳಿಗಿಂತ ಕಡಿಮೆ ಇರದ ಮತ್ತು 1000 ಚದರ ಮೀಟರ್ ಗಿಂತ ಹೆಚ್ಚಲ್ಲದ ನಿವೇಶನ ಪ್ರದೇಶದಲ್ಲಿ ಕಟ್ಟಡವನ್ನು ಹೊಂದಿರುವವರು ಮಳೆ ನೀರು ಕೊಯ್ಡು ಕಡ್ಡಾಯಗೊಳಿಸಬೇಕು. 2021ರ ಪ್ರಾರಂಭಕ್ಕೆ ಮೊದಲು ಮಳೆ ನೀರು ಕೊಯ್ಲು ರಚನೆಯನ್ನು ಕಲ್ಪಿಸದಿದ್ದರೆ ಕೆಲವು ಷರತ್ತುಗಳಿಗೆ ಒಳಪಟ್ಟು ಮಳೆ ನೀರು ಶೇಖರಣೆಗಾಗಿ, ಬಳಕೆಗಾಗಿ ಅಥವಾ ಅಂತರ್ಜಲ ಪುನಃಭರ್ತಿಗಾಗಿ ಮಳೆ ನೀರು ಕೊಯ್ದು ರಚನೆಯನ್ನು ಒದಗಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT