ಪಟೇಲ್ ವಿಗ್ರಹಕ್ಕೆ ಸಿಎಂ ಮಾಲಾರ್ಪಣೆ 
ರಾಜ್ಯ

ಕಲ್ಯಾಣ ಕರ್ನಾಟಕ ಭಾಗಕ್ಕೆ ಯಡಿಯೂರಪ್ಪ ಮತ್ತೊಬ್ಬ ಉಕ್ಕಿನ ಮನುಷ್ಯ: ಬಸವರಾಜ ಬೊಮ್ಮಾಯಿ

ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಿ.ಎಸ್‌. ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ. 

ಕಲಬುರ್ಗಿ: ಹೈದರಾಬಾದ್‌ ಕರ್ನಾಟಕದ ವಿಮೋಚನೆಗೆ ಕಾರಣರಾದ ಸರ್ದಾರ್‌ ವಲ್ಲಭಭಾಯಿ ಪಟೇಲರು ಪ್ರಥಮ ಉಕ್ಕಿನ ಮನುಷ್ಯರಾದರೆ, ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಿ.ಎಸ್‌. ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ. 

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದಾರೆ. ಹಲವಾರು ಕಾರ್ಯಕ್ರಮಗಳಿಗೂ ಅವರು ರೂವಾರಿಗಳಾಗಿದ್ದಾರೆ. ಅವರ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ ಎಂದರು.

ಜನರ ಜೀವನ ಮಟ್ಟ ಸುಧಾರಿಸುವ ಮೂಲಕ ಕಲ್ಯಾಣ ಕರ್ನಾಟಕ ಹೆಸರಿಗೆ ಸಾರ್ಥಕತೆ ತುಂಬುವ ಛಲದಿಂದ ನಾನು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ನಮ್ಮ ಈ ಸಂಕಲ್ಪಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದರು. ಸರ್ದಾರ್‌ ವಲ್ಲಭಭಾಯಿ ಪಟೇಲರು ಭಾರತವನ್ನು ರಿಪಬ್ಲಿಕ್‌ ದೇಶವನ್ನಾಗಿ  ಮಾಡಿದ ಪ್ರಥಮ ನಾಯಕರು. ಅವರು ನಮಗೆಲ್ಲ ಆದರ್ಶರು. ಅವರು ತೋರಿಸಿರುವ ತತ್ವ– ಆದರ್ಶಗಳ ಅಡಿಯಲ್ಲಿ ಸ್ವತಂತ್ರ ಭಾರತವನ್ನು ನಾವು ಮುನ್ನಡೆ ಮಾಡುತ್ತಿದ್ದೇವೆ’ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು, ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

SCROLL FOR NEXT