ಹೈಕೋರ್ಟ್ 
ರಾಜ್ಯ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ತ್ವರಿತಗೊಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ

ರಾಜ್ಯದಲ್ಲಿ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಅಂತಿಮ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಲು ರಾಜ್ಯ ಸರ್ಕಾರದ ಮನವಿಯಂತೆ  ಎರಡು ತಿಂಗಳ ಸಮಯಾವಕಾಶವನ್ನು ಹೈಕೋರ್ಟ್ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಅಂತಿಮ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಲು ರಾಜ್ಯ ಸರ್ಕಾರದ ಮನವಿಯಂತೆ  ಎರಡು ತಿಂಗಳ ಸಮಯಾವಕಾಶವನ್ನು ಹೈಕೋರ್ಟ್ ನೀಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರನ್ನೊಳಗೊಂಡ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ,  2021 ರ ನವೆಂಬರ್ 17 ಕ್ಕೆ ಮುಂದೂಡಿತು.
ಅವಧಿ ಮುಗಿದ ನಂತರವೂ ಚುನಾವಣೆ ನಡೆಸಲು ವಿಳಂಬ ಮಾಡಿದ್ದಕ್ಕಾಗಿ ನ್ಯಾಯಾಲಯವು ಸ್ವಯಂಪ್ರೇರಿತ ಪಿಐಎಲ್  ದಾಖಲಿಸಿಕೊಂಡಿತ್ತು.

ರಾಜ್ಯ ಚುನಾವಣಾ ಆಯೋಗ ನ್ಯಾಯಾಲಯದ ಮುಂದೆ ಸಲ್ಲಿಸಿದ ಸ್ಥಿತಿ ವರದಿ ಪ್ರಕಾರ,  ನಗರ ಪುರಸಭೆಗಳು, ಪಟ್ಟಣ ಪುರಸಭೆಗಳು ಮತ್ತು ಪಟ್ಟಣ ಪಂಚಾಯತ್‌ಗಳನ್ನು ಒಳಗೊಂಡ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವಿಳಂಬವಾಗಿದೆ. 

ಬೆಂಗಳೂರು ನಗರ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ, ಗದಗ, ಧಾರವಾಡ ಮತ್ತು ತುಮಕೂರು ಸೇರಿದಂತೆ ಎಲ್ಲಾ  56 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ ಗಳನ್ನೊಳಗೊಂಡ ಅಂತಿಮ ಮೀಸಲಾತಿ ಅಧಿಸೂಚನೆಗಾಗಿ ಕಾಯುತ್ತಿರುವುದರಿಂದ ಚುನಾವಣೆ ವಿಳಂಬವಾಗಿರುವುದಾಗಿ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT