ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ದಾಖಲೆ 28 ಲಕ್ಷ ಡೋಸ್ ಲಸಿಕೆ: ಲಸಿಕೆ ನೀಡಿಕೆಯಲ್ಲಿ ದೇಶಕ್ಕೇ ನಂ.1 ಎನಿಸಿಕೊಂಡ ಕರ್ನಾಟಕ!

ರಾಜ್ಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಎಲ್ಲೆಡೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನ 28.4 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿಯೇ ನಂ.1 ಸ್ಥಾನ ಪಡೆದುಕೊಂಡ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದುಕೊಂಡಿದೆ.

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಎಲ್ಲೆಡೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನ 28.4 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿಯೇ ನಂ.1 ಸ್ಥಾನ ಪಡೆದುಕೊಂಡ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದುಕೊಂಡಿದೆ. 

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 71ನೇ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿನ್ನೆ ಬೃಹತ್ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. 

ಲಸಿಕಾ ಮೇಳದ ಅಂಗವಾಗಿ ಶುಕ್ರವಾರವೊಂದೇ ದಿನ 30 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಬೇಕೆಂಬ ಗುರಿಯನ್ನು ಹೊಂದಲಾಗಿತ್ತು. ಇದರಂತೆ ರಾತ್ರಿ 9.30ರ ಮಾಹಿತಿಯಂತೆ ಗುರಿಯ ಶೇ.88 ಸಾಧನೆಯಾಗಿದೆ. 12 ಸಾವಿರ ಲಸಿಕಾ ಕೇಂದ್ರದ್ಲ್ಲಿ ಲಸಿಕೆ ವಿತರಿಸಲಾಗಿದೆ ಎಂದು ತಿಳಿದುಬಂದಿದೆ. 

ಶಿವಮೊಗ್ಗ, ಬೆಂಗಳೂರ ನಗರ, ಧಾರವಾಡ, ರಾಮನಗರ, ಹಾಸನ, ದಾವಣೆಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಮತ್ತು ಹಾವೇರಿ, ಬಾಗಲಕೋಟೆ ಜಿಲ್ಲೆಯಲ್ಲಿ ಶೇ.100ರಷ್ಟು ಗುರಿ ತಲುಪಲಾಗಿದೆ. 

ಉಳಿದಂತೆ ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ದಕ್ಷಿಣ ಕನ್ನಡ, ಕೊಡಗು, ಉತ್ತನ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಮೈಸೂರು, ಬಿಬಿಎಂಪಿ, ವಿಜಯಪುರ, ಕೋಲಾರ ಮತ್ತು ಯಾದಗಿರಿ ಜಿಲ್ಲೆ ಶೇ.75ಕ್ಕಿಂತ ಹೆಚ್ಚು ಸಾಧನೆ ಮಾಡಿದೆ. ಇನ್ನು ಕಲಬುರಗಿಯನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಶೇ.50 ಮೀರಿದ ಸಾಧನೆಯಾಗಿದೆ. 

ಬೆಂಗಳೂರಿನಲ್ಲಿ 4.79 ಲಕ್ಷ, ಬೆಳಗಾವಿ 2.54 ಲಕ್ಷ, ಬಳ್ಳಾರಿ 1.40 ಲಕ್ಷ ಡೋಸ್ ಲಸಿಕೆ ವಿತರಣೆಯಾಗಿದ್ದು, ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿದೆ. 

ಇನ್ನು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರಪ್ರದೇಶ ಹಾಗೂ ಬಿಹಾರ ರಾಜ್ಯಕ್ಕಿಂತ ಹೆಚ್ಚು ಲಸಿಕೆಯನ್ನು ರಾಜ್ಯದಲ್ಲಿ ವಿತರಿಸಲಾಗಿದೆ. ಈ ಐತಿಹಾಸಿಕ ಲಸಿಕಾ ಅಭಇಯಾನದಲ್ಲಿ ಭಾಗಿಯಾದ ಆರೋಗ್ಯ ಕಾರ್ಯಕರ್ತರು ಮತ್ತು ಇತರೆ ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ. ಕೋವಿಡ್ ವಿರುದ್ಧದ ಹೋರಾಟವನ್ನು ಮುನ್ನಡೆಸಿದ ಪ್ರಧಾನಿ ಮೋದಿಯವರ ಜನ್ಮದಿನದಂದೇ ಈ ಸಾಧನೆ ಆಘಿದೆ. ಈ ಮಧ್ಯೆ ರಾಜ್ಯದಲ್ಲಿ 5 ಕೋಟಿ ಡೋಸ್ ಗಿಂತ ಹೆಚ್ಚು ಲಸಿಕೆ ವಿತರಣೆ ನಡೆದಿದೆ. ಸೆಪ್ಟೆಂಬರ್ ನಲ್ಲಿ ಒಂದೂವರೆ ಕೋಟಿ ಡೋಸ್ ಲಸಿಕೆ ನೀಡಬೇಕೆಂಬ ಗುರು ಮುಟ್ಟುವ ವಿಶ್ವಾಸವಿದೆ ಎಂದು ಸಚಿವ ಸುಧಾಕರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT